ಕಪ್ನಹಳ್ಳಿಯಲ್ಲಿ ಮಳೆಗೆ ಮನೆಗೋಡೆ ಕುಸಿತ


ಸುದ್ದಿಲೈವ್/ಶಿಕಾರಿಪುರ

ತಾಲ್ಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಮನೆ ಗೋಡೆ ಕುಸಿದು ನಾಲ್ವರಿಗೆ ಗಾಯಗಳಾಗಿವೆ.

ಮೊನ್ನೆ ರಾತ್ರಿ ಸುರಿದ ಮಳೆಗೆ ಕಪ್ಪನಹಳ್ಳಿ ಗ್ರಾಮದ ನಿವಾಸಿ ಶಿವಮೂರ್ತಿ ಮನೆ ಗೋಡೆ ಕುಸಿದಿದೆ. ರಾತ್ರಿ ಸಂದರ್ಭದಲ್ಲಿ ಕುಟುಂಬದವರೆಲ್ಲರೂ ಮಲಗಿದ ಸಂದರ್ಭದಲ್ಲಿ ಮನೆ ಕುಸಿದಿದೆ. ತಂದೆ ಶಿವಮೂರ್ತಿ(40) ತಾಯಿ ಚೇತನಾ(35),ಮಕ್ಕಳಾದ ಯುವರಾಜ(13)  ಕೃಷ್ಣ(11) ಗಾಯಗೊಂಡಿದ್ದಾರೆ. 

ತಕ್ಷಣ ಗ್ರಾಮಸ್ಥರು ಗೋಡೆ ಕುಸಿದ ಮಣ್ಣನ್ನು ತೆಗೆದು ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದೇ ರೀತಿ ನಾಗರಾಜಪ್ಪ ಮನೆ ಗೋಡೆ ಕುಸಿದಿದೆ. ಆದರೆ ಮನೆಯಲ್ಲಿ ಯಾರು ಇರಲಿಲ್ಲ.

ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಸಂಸದರು

ಗಾಯಗೊಂಡ ನಾಲ್ವರನ್ನ ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ. ನಿನ್ನೆ ಸಂಸದ ರಾಘವೇಂದ್ರ ಅವರ ಯೋಗಕ್ಷೇಮ ಮತ್ತು ಸರ್ಕಾರದಿಂದ ಪರಿಹಾರದ ಬಗ್ಗೆ ಕೊಡಿಸುವ ಭರವಸೆ ನೀಡಿದ್ದಾರೆ. 

ಇದನ್ನೂ ಓದಿ-https://www.suddilive.in/2024/07/blog-post_236.html

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close