ನಾಳೆ ಜಿಲ್ಲೆಯಾದ್ಯಂತ ಶಾಲೆ, ಕಾಲೇಜು ಅಂಗನವಾಡಿಗಳಿಗೆ ರಜೆ ಘೋಷಿಸಿದ ಡಿಸಿ


ಸುದ್ದಿಲೈವ್/ಶಿವಮೊಗ್ಗ

ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜಾ ಘೋಷಿಸಿ ಜಿಲ್ಲಾಧಿಕಾರಿ ಗುರದತ್ತ ಹೆಗಡೆ ಆದೇಶಿಸಿದ್ದಾರೆ. 


ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ,  ಪದವಿ ಪೂರ್ವಕಾಲೇಜು,  ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಶುಕ್ರವಾರ  ರಜೆ ಘೋಷಿಸಿ ಮಾನ್ಯ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದಾರೆ.

ಡಿಸಿಯವರು ಘೋಷಿಸುವ ಮುನ್ನ ಹೊಸನಗರ, ತೀರ್ಥಹಳ್ಳಿ, ಸೊರಬ ಮತ್ತು ಸಾಗರ ತಾಲೂಕಿನ ತಹಶೀಲ್ದಾರ್ ಅವರು ಶಾಲಾ‌, ಕಾಲೇಜುಗಳಿಗೆ ಆದೇಶಿಸಿ ರಜೆ ಘೋಷಿಸಿದ್ದರು. ಈಗ ಇಡೀ ಜಿಲ್ಲೆಗೆ ರಜೆಯನ್ನ ಡಿಸಿ ಗುರುದತ್ತ ಹೆಗಡೆ ಆದೇಶಿಸಿ ಹೊರಡಿಸಿದ್ದಾರೆ. 

ಇದನ್ನೂ ಓದಿ-https://www.suddilive.in/2024/07/ksrtc_18.html

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close