ಸುದ್ದಿಲೈವ್/ಶಿವಮೊಗ್ಗ
ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನಲ್ಲಿ ವ್ಯತ್ಯಯವಾಗುವ ಬಗ್ಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆ ಹೊರಡಿಸಿದೆ.
ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಡಿ.16 ಮತ್ತು 17 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.