![]() |
ಸಾಂಧರ್ಭಿಕ ಚಿತ್ರ |
ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಹಿನ್ನಲೆಯಲ್ಲಿ ಅಧಿಕ ಮಳೆ ಸಂಭವವಾಗುವ ಕಾರಣ, ಪದವಿ ಪೂರ್ವ ಕಾಲೇಜುಗಳು, 1-10 ನೇ ತರಗತಿ ಮತ್ತು ಅಂಗನವಾಡಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ಪ್ರಭಾರಿ ಆಗಿರುವ ಜಿಲ್ಲಾ ಪಂಚಾಯತ್ ಸಿಇಒ ಹೇಮತ್ ಕುಮಾರ್ ಅಧಿಕ ಮಳೆ ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಾರೆ. ಮುಂದಿನ ಎರಡು ದಿನಗಳು ಅಧಿಕ ಮಳೆಯಾಗುವ ಹಿನ್ನಲೆಯಲ್ಲಿ ಜಿಕ್ಕೆಯಲ್ಲಿ ಹವಮಾನ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮಕ್ಕಳಿಗೆ ತೊಂದರೆಯಾಗದಂತೆ ಡಿ.3 ರಂದು ಇಂದು ಮಾತ್ರ ರಜೆ ಘೋಷಿಸಿದೆ. ಇಂದು ನೀಡಿದ ರಜೆಯನ್ನ ಮುಂದೆ ಬರುವ ಸಾರ್ವತ್ರಿಕ ರಜೆಗಳಲ್ಲಿ ಸರಿ ದೂಗಿಸಿಕೊಳ್ಳಲು ಸೂಚಿಸಲಾಗಿದೆ. ವಿಪತ್ತು ನಿರ್ವಹಣ ತುರ್ತು ಅಧಿಕೃತ ವಿಜ್ಞಾಪನೆಯಲ್ಲಿ ಡಿಸಿಯವರು ಸೂಚಿಸಿದ್ದಾರೆ.
ಫೆಂಗಲ್ ಚಂಡಮಾರುತವು ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ಭಾಗದಲ್ಲಿ ಅಬ್ಬರಿಸಿದ್ದ ಮಳೆ ಕಳೆದ ಎರಡು ದಿನದಿಂದ ರಾಜ್ಯದಲ್ಲಿ ಅಬ್ಬರಿಸುತ್ತಿದೆ. ಈ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ವಿಫರೀತ ಮಳೆ ಆರ್ಭಟ ಜೋರಾಗಿದೆ. ಹೀಗಾಗಿ ರಾಜ್ಯದ ಕೆಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.