ಆಸ್ತಿ ಹಾನಿ ಹಾಗೂ ಜೀವಹಾನಿ ಸಂಭವಿಸಿದರೆ ಸಂಬಂಧ ಪಟ್ಟ ಇಲಾಖೆ ಜವಬ್ದಾರರು-ಸ್ಮಾರ್ಟ್ ಸಿಟಿ ಎಂಡಿ ಎಚ್ಚರಿಕೆ



ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಸ್ಮಾರ್ಟ್ ಸಿಟಿ ವತಿಯಿಂದ ಶಿವಮೊಗ್ಗ ನಗರದ ಸ್ಮಾರ್ಟ್ ಸಿಟಿ ಅನುಮೋದಿತ ವ್ಯಾಪ್ತಿ ಪ್ರದೇಶದಲ್ಲಿ ರಸ್ತೆ ಕಾಮಗಾರಿಗಳನ್ನು ಅಂತರ್ ಇಲಾಖೆಯ ಸಮನ್ವಯ ಸಮಿತಿಯ ಒಪ್ಪಿಗೆಯ ಮೇರೆಗೆ ಈಗಾಗಲೇ ನಿರ್ವಹಿಸಲಾಗಿದೆ. 

ಆದರೂ ಸಹ ಜಲಮಂಡಳಿ (ವಾಟರ್ ಬೋರ್ಡ್) ಹಾಗೂ ವಿದ್ಯುತ್ ಪೂರೈಕಾ ಇಲಾಖೆ (ಮೆಸ್ಕಾಂ) ರವರು ಶಿವಮೊಗ್ಗ ಸ್ಮಾರ್ಟ್ ಸಿಟಿ ಅನುಮತಿ ಇಲ್ಲದೆ, ಈಗಾಗಲೇ ಸುಂದರವಾಗಿ ನಿರ್ಮಿಸಿರುವ ಕಾಮಗಾರಿಗಳನ್ನು ಎಲ್ಲೆಂದರಲ್ಲಿ ಅಗೆದು, ಗುಂಡಿ ಮಾಡಿ ಅದನ್ನು ಯಥಾಸ್ಥಿತಿಗೆ ತಾರದೆ, ಹಾಗೆಯೇ ಬಿಟ್ಟು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದಾರೆ. 

ಸಾರ್ವಜನಿಕರು ಶಿವಮೊಗ್ಗ ಸ್ಮಾರ್ಟ್ ಸಿಟಿಯವರು ಕಳಪೆ ಕಾಮಗಾರಿ ನಿರ್ವಹಿಸುತ್ತಿದ್ದಾರೆ ಎಂದು ತಪ್ಪಾಗಿ ಅರ್ಥೈಸಿ ದೂರುತ್ತಿದ್ದಾರೆ. ಜಲಮಂಡಳಿ ಹಾಗೂ ಮೆಸ್ಕಾಂ ಇಲಾಖೆಯ ಇಂತಹ ನಿರ್ಲಕ್ಷದಿಂದ ಸಾರ್ವಜನಿಕರ ಆಸ್ತಿ ಪಾಸ್ತಿ ಅಥವಾ ಜೀವಹಾನಿಯಾದಲ್ಲಿ ಅದಕ್ಕೆ ಅವರೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಶಿವಮೊಗ್ಗ ಸ್ಮಾರ್ಟ್ಸಿಟಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close