Suddilive || Shivamogga
ತನಿಖೆ ನಡೆಸಿ ಕ್ರಮ ಡಿಸಿ ಭರವಸೆ-DC promises to investigate and take action
ಆದಿಚುಂಚನಗಿರಿಯಲ್ಲಿ ನಿನ್ನೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಕಟ್ ಮಾಡಿರುವ ಆರೋಪ ಕೇಳಿ ಬಂದಿರುವ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಬ್ರಾಹ್ಮಣ ಸಂಘ ಜಿಲ್ಲಾಧಿಕಾರಿಗಳನ್ನ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ನಿನ್ನೆ ನಡೆದ ಆದಿಚುಂಚನಗಿರಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕಟ್ ಮಾಡಿ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟ ವಿಷಯವನ್ನ ಪ್ರಸ್ತಾಪಿಸಿರುವ ಸಂಘ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಂಘ ಮನವಿ ಮಾಡಿದೆ.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಧಾರ್ಮಿಕ ಭಾವನೆಗಳಿಗೆ ದಕ್ಕೆ ನಡೆಸುವಂತ ಕೆಲಸ ನಾವು ಮಾಡೊಲ್ಲ. ಈ ಬಗ್ಗೆ ಒಂದು ವಾರದಲ್ಲಿ ವರದಿ ತರೆಸಿಕೊಂಡು ತಪ್ಪುಕಂಡಿ ಬಂದಲ್ಲಿ ಕ್ರಮಜರುಗಿಸುವುದಾಗಿ ಸ್ಪಷ್ಟಪಡಿಸಿದರು.
promises to investigate and take action