Suddilive || Shivamogga
ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿರುವ ಕೇಂದ್ರ BJP ಸರ್ಕಾರವನ್ನು ವಜಾಗೊಳಿಸಲು ಒತ್ತಾಯಿಸಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೇಸ್ ವತಿಯಿಂದ ಗೋಪಿ ವೃತ್ತದಲ್ಲಿ ಪ್ರತಿಭಟನೆ ನೆಡೆಸಲಾಯಿತು.
ಕಾಂಗ್ರೆಸ್ ಕಚೇರಿಯಿಂದ ಗೋಪಿವೃತ್ತದ ವರೆಗೆ ಮೆರವಣಿಗೆ ನಡೆಸಿದ ಸಂಘಟನೆ ಕಾರ್ಯಕರ್ತರು ಜಟಕಾ ಬಂಡಿ ಏರಿ ಬಂದು ಕೇಂದ್ರ ಸರ್ಕಾರ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ ರವರು ಮಾತನಾಡಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪದೇ ಪದೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಿದ್ದು, ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತಿದೆ.
ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡುತ್ತಾ ಜನಸಾಮಾನ್ಯರ ಮೇಲೆ ತೆರಿಗೆಯ ಅಧಿಕ ಹೊರೆ ಹೊರಿಸುತ್ತಿದೆ. ಇದರಿಂದಾಗಿ ಜನಸಾಮಾನ್ಯರ ಜೀವನ ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ.ಎಂದು ಆಕ್ರೋಶ ವ್ಯಕ್ತ ಪಡಿಸಿದರು
ಕೆಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಗಳಾದ ಏನ್ ರಮೇಶ್ ರವರು ಮಾತನಾಡಿ ಇದೀಗ ಕೇಂದ್ರ ಸರ್ಕಾರ ಮತ್ತೆ ಡಿಸೇಲ್ ಮೇಲೆ ಲೀಟರ್ಗೆ 2 ರೂ. ಅಬಕಾರಿ ಶುಲ್ಕ ಹೆಚ್ಚಿಸಿದೆ. ಎಲ್.ಪಿ.ಜಿ. ಗ್ಯಾಸ್ ಸಿಲಿಂಡರ್ ಬೆಲೆಯನ್ನು 50 ರೂ. ಹೆಚ್ಚಿಸಿದೆ. ಸಿ.ಎನ್.ಜಿ. ದರವನ್ನೂ ಪ್ರತಿ ಕೆ.ಜಿ.ಗೆ 1 ರೂ. ಹೆಚ್ಚಿಸಿದೆ. ಡೀಸೆಲ್, ಅಡುಗೆ ಅನಿಲ, ಸಿ.ಎನ್.ಜಿ. ದರ ಹೆಚ್ಚಳ ಮಾಡಿರುವುದು ಇತರ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಲಿದೆ.
l ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ ರೂ. 2 ಹೆಚ್ಚಿಸುವ ಮತ್ತು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ರೂ. 50 ಹೆಚ್ಚಿಸುವ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವನ್ನು ಜಿಲ್ಲಾ ಯುವ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ. ಯುವ ಕಾಂಗ್ರೇಸ್ ಅಧ್ಯಕ್ಷರಾದ ಹರ್ಷಿತ್ ಗೌಡ ರವರು ಮಾತನಾಡಿ ಈ ಬೆಲೆ ಏರಿಕೆಗಳು ಈಗಾಗಲೇ ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಸಾಮಾನ್ಯ ಜನರು, ರೈತರು, ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಭಾರಿ ಹೊರೆಯಾಗಿದೆ.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೂ ಉದ್ಯೋಗ ಸೃಷ್ಟಿ ಮಾಡುವುದನ್ನಾಗಲೀ, ಜನಸಾಮಾನ್ಯರ ಜೀವನ ಸರಳಗೊಳಿಸುವ ಕೆಲಸವನ್ನಾಗಲೀ ಮಾಡುತ್ತಿಲ್ಲ. ಬದಲಿಗೆ ಜನರಿಂದ ಮಿತಿಮೀರಿ ತೆರಿಗೆ ವಸೂಲು ಮಾಡುವ ಮೂಲಕ ಜನರನ್ನು ಸುಲಿಗೆ ಮಾಡಲು ಹೊರಟಿದೆ. ಹಾಗೆಯೇ ಮಾಜಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಯಾದ ಯಮುನಾ ರಂಗೇಗೌಡ್ರು ಮಾತನಾಡಿ ಗೌರವಾನ್ವಿತ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಕೇಂದ್ರ ಸರ್ಕಾರದ ಬೆಲೆ ಏರಿಕೆಯ ನಿರ್ಧಾರವನ್ನು ಹಿಂಪಡೆಯುವಂತೆ ನಿರ್ದೇಶನ ನೀಡಬೇಕು. ಇಲ್ಲವೇ ಜನವಿರೋಧಿ ಕೇಂದ್ರ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಈ ಮೂಲಕ ಆಗ್ರಹಿಸಲಾಯಿತು
ಈ ಸಂದರ್ಭದಲ್ಲಿ ಪಿ ಎಲ್ ಡಿ ಬ್ಯಾಂಕ್ ನ ಅಧ್ಯಕ್ಷರಾದ ವಿಜಯ ಕುಮಾರ್ (ದನಿ),ಕಾನೂನು ಸಲಹೆ ಗಾರರಾದ ಪೂರ್ಣೇಶ್ ,ಯುವ ಕಾಂಗ್ರೇಸ್ ವಿಧಾನ ಸಭಾ ಅಧ್ಯಕ್ಷರು ಗಳಾದ ಚರಣ್,ಪ್ರವೀಣ್ ,ಗಿರೀಶ್ ,ಸಕ್ಲೇನ್ ,ಪ್ರವೀಣ್ ,ಶಶಿಕುಮಾರ್ ,ಅಬ್ದುಲ್ ,ಸತ್ತರ್ ,ಮಲವಗೊಪ್ಪ ಶಿವು ,ಆಕಾಶ್ ,ಅಶೋಕ್ ,ಕಾಶಿಫ್ ಬಾಲಾಜಿ , ಧನರಾಜ್ ,ನಿಖಿಲ್ ಎಸ್ ಸಿ ,ವಿಷ್ಣು ಕುಮಾರ್ ಅಕ್ಬರ್ ತೌಸೀಫ್ ಹಾಗೂ ನೂರಾರು ಯುವ ಕಾಂಗ್ರೇಸ್ ನ ಪದಾದಿ ಕಾರಿಗಳು ಪಾಲ್ಗೊಂಡು ಆಕ್ರೋಶ ವ್ಯಕ್ತ ಪಡಿಸಿದರು