SUDDILIVE. SHIVAMOGGA
ವಸತಿ ಶಾಲೆಗಳ ಖಾಯಂ ನೌಕರರ ಸಮಸ್ಯೆಗಳನ್ನು ಪರಿಷ್ಕರಿಸುವಂತೆ ಆಗ್ರಹ-Demand to review the issues of permanent employees of residential schools
ವಸತಿ ಶಾಲೆಗಳ ಖಾಯಂ ನೌಕರರ ಸಮಸ್ಯೆಗಳನ್ನು ಪರಿಷ್ಕರಿಸಬೇಕೆಂದು ಆಗ್ರಹಿಸಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಯಗಳ ನೌಕರರ ಸಂಘ, ಶಿವಮೊಗ್ಗ ಜಿಲ್ಲಾ ಘಟಕದವತಿಯಿಂದ ಇಂದು ನೆಹರೂ ಕ್ರೀಡಾಂಗಣದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧೀನದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ರಾಜ್ಯಾದ್ಯಂತ ೮೨೧ ವಸತಿ ಶಾಲೆ/ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, ೨ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವಸತಿಯುತ ಶಿಕ್ಷಣವನ್ನು ಉಚಿತವಾಗಿ ಪಡೆಯುತ್ತಿದ್ದಾರೆ.
ಖಾಯಂ ಬೋಧಕ-ಬೋಧಕೇತರ ಸಿಬ್ಬಂದಿಗಳ ಶ್ರಮದಿಂದ ಈ ಭಾರಿ ಉತ್ತಮ ಫಲಿತಾಂಶ ಬಂದಿದ್ದು, ನವೋದಯ ವಿದ್ಯಾಲಯ ಮತ್ತು ಶಿಕ್ಷಣ ಇಲಾಖೆಯ ಶಾಲೆಗಳ ಅಥವಾ ಸಮಾಜ ಕಲ್ಯಾಣ ಇಲಾಖೆಯ ಆಶ್ರಮ ಶಾಲೆಗಳ ಸಿಬ್ಬಂದಿಗಳಿಗೆ ದೊರೆಯುವ ಹಲವು ಸೌಲಭ್ಯಗಳು ಕ್ರೆöÊಸ್ ಖಾಯಂ ನೌಕರರಿಗೆ ಸಿಗುತ್ತಿಲ್ಲ. ಕೂಡಲೇ ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್ಸಿ-ಎಸ್ಟಿ, ಬಿಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು, ಖಾಯಂ ನೌಕರರಿಗೆ ಜ್ಯೋತಿ ಸಂಜೀವಿನಿ ಅನುಷ್ಟಾನಗೊಳಿಸಬೇಕು. ಮರಣ ಮತ್ತು ನಿವೃತ್ತಿ ಉಪಧಾನ ಸೌಲಭ್ಯ ಒದಗಿಸಬೇಕು. ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯತಿ ನೀಡಬೇಕು. ಖಾಯಂ ನೌಕರರಿಗೆ ಶೇ.೧೦ ವಿಶೇಷ ಭತ್ಯೆ ಮಂಜೂರು ಮಾಡಬೇಕೆಂದು ಸಂಘ ಮನವಿ ಮೂಲಕ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಉಮೇಶಪ್ಪ, ಅಧ್ಯಕ್ಷರಾದ ಶ್ರೀನಿವಾಸ್, ಉಪಾಧ್ಯಕ್ಷ ಶಕ್ತಿಪ್ರಸಾದ್, ಪ್ರಧಾನ ಕಾರ್ಯದರ್ಶಿ ಮೇಘರಾಜ್, ಖಜಾಂಚಿ ವಾಣಿಶ್ರೀ ಮತ್ತಿತರರಿದ್ದರು.
Demand to review the issues