SUDDILIVE || SHIVAMOGGA
ಗಾಂಜಾ ಗಿರಾಕಿಗಳಿಗೆ ಶಿಕ್ಷೆ ಪ್ರಕಟ-Punishment announced for Ganja smugler
ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳ ವಿರುದ್ಧ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ತಲಾ ನಾಲ್ಕು ವರ್ಷ ಕಠಿಣ ಕಾರಾಗೇಹ ವಾಸ ಹಾಗೂ 25 ಸಾವಿರ ರೂ. ದಂಡ ವಿಧಿಸಿ
ಮೇ.08 ರಂದು ಹೆಚ್.ಕೆ ಜಂಕ್ಷನ್ ಕಡೆಯಿಂದ ಲಕ್ಕಿನಕೊಪ್ಪ ಕಡೆಗೆ ಬರುವ ರಸ್ತೆಯಲ್ಲಿ, ಪಲ್ಸರ್ ಬೈಕ್ ನಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ದೂರು ದಾಖಲಿಸಿಕೊಳ್ಳಲಾಗಿತ್ತು.
ಪ್ರಕಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಶ್ರೀ ವಿಜಯಾನಂದ್, ಎ.ಎಸ್.ಐ. ಸಿಇಎನ್ ಪೊಲೀಸ್ ಠಾಣೆ ಶಿವಮೊಗ್ಗ ರವರು ಪ್ರಕರಣದ ತನಿಖೆ ಪೂರೈಸಿ, ಆರೋಪಿತರ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.
ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸುರೇಶ್ ಕುಮಾರ್ ಎ. ಎಂ. ಸರ್ಕಾರಿ ಅಭಿಯೋಜಕರವರು, ಪ್ರಕರಣದ ವಾದ ಮಂಡಿಸಿದ್ದು, ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತರ ವಿರುದ್ದ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ ಶ್ರೀ ಮಂಜುನಾಥ್ ನಾಯಕ್ ರವರು ಆರೋಪಿತರಾದ 1) ಜೀವನ್ ಎಂ, 21 ವರ್ಷ, ಭದ್ರಾವತಿ, 2) ಶರವಣ 35 ವರ್ಷ, ಹೊಸಮನೆ, ಭದ್ರಾವತಿ ಮತ್ತು 3) ಜೀವನ್ ಕೆ, 21 ವರ್ಷ, ಭದ್ರಾವತಿ ಟೌನ್ ಇವರಿಗೆ ತಲಾ 04 ವರ್ಷ ಕಠಿಣ ಕಾರಾವಾಸ ಶಿಕ್ಷೆ, ಮತ್ತು ರೂ 25,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 06 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ.
Ganja smugler