SUDDILIVE || SHIVAMOGGA
ಮೊಂಡಾಟ ಮೆರೆದ ಕಮಲ್ ಹಾಸನ್ ಪ್ರತಿಕೃತಿ ದಹನ-Kamal Haasan's effigy burnt for showing off his baldness
ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಮೊಂಡಾಟ ಮೆರೆದ ನಟ ಕಮಲ್ ಹಾಸನ್ ಅವರ ಪ್ರತಿಕೃತಿಯನ್ನ ಕರವೇ ಸ್ವಾಭಿಮಾನಿ ಬಣ ಖಂಡಿಸಿ ನಟನ ಪ್ರತಿಕೃತಿ ದಹಿಸಿದೆ.
ನಗರದ ಬಸ್ ನಿಲ್ದಾಣದ ಅಶೋಕ ವೃತ್ತದ ಬಳಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ. ಈ ವೇಳೆ ಕಮಲ್ ಹಾಸನ್ ಅವರ ಫ್ಲೆಕ್ಸ್ ಫೊಟೊವನ್ನ ಸುಡುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿದ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ ಹೆಚ್.ಎಸ್ ನಟ ಕಮಲ ಹಾಸನ್ ತಮಿಳು ಚಿತ್ರರಂಗದಲ್ಲಿ ಫ್ಲಾಪ್ ಆಗಿರುವ ಕಾರಣ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಉದ್ದೇಶದಿಂದ ಕನ್ನಡವನ್ನ ತುಳಿಯುವ ಕೆಲಸ ಮಾಡಿದ್ದಾರೆ. ತಮ್ಮ ಏಳಿಗೆಗಾಗಿ ಕನ್ನಡದ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಸಭೆಯಲ್ಲಿ ಸ್ಥಾನ ಪಡೆಯಲು ಕನ್ನಡವನ್ನ ಹತ್ತಿಕ್ಕಿ ತಮಿಳಿನ ಪರ ಇದ್ದೀನಿ ಎಂಬ ಸಂದೇಶ ನೀಡಿದ್ದಾರೆ. ಕನ್ನಡಿಗರನ್ನ ಕೆಣಕುವ ಕೆಲಸ ಮಾಡಿರುವ ನಟ ಕಮಲ್ ಹಾಸನ್ ಅವರ ಅಭಿನಯಿಸಿರುವ ಥಗ್ ಲೈಫ್ ಚಲನಚಿತ್ರ ಜೂನ್ 5 ರಂದು ಬಿಡುಗಡೆಯಾಗಲಿದ್ದು ಅದನ್ನ ನಾವು ಶಿವಮೊಗ್ಗದಲ್ಲಿ ಬಿಡುಗಡೆಯಾಗಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಒಂದು ವೇಳೆ ಚಲನಚಿತ್ರ ಬಿಡುಗಡೆಯಾದರೆ ಚಲನಚಿತ್ರ ಮಂದಿರಕ್ಕೆ ಮುತ್ತಿಗೆಹಾಕುವ ಕೆಲಸ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ, ಪ್ರಚಾರ ಸಮಿತಿ ಅಧ್ಯಕ್ಷ ಮಾಲ್ತೇಶ್, ಜಿಲ್ಲಾ ಉಪಾಧ್ಯಕ್ಷ ವಿಜಯ ಕುಮಾರ್, ಜಿಲ್ಲಾ ಖಜಾಂಚಿ ಗಣೇಶ್, ಪ್ರಧಾನ ಕಾರ್ಯದರ್ಶಿ ಮೊಹದ್ ಶಫಿ, ಶಿಕಾರಿಪುರದ ಗೌರವಾಧ್ಯಕ್ಷ ಶಿವಯ್ಯ ಶಾಸ್ತ್ರಿ, ಜೀವನ್, ಉಮೇಶ್ ಗದ್ದೆಮನೆ, ಮನು, ಮೊದಲಾದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಭಾಗಿಯಾಗಿದ್ದರು.
Kamal Haasan's effigy burnt for showing off his baldness