SUDDILIVE || SHIVAMOGGA
ಜೂ 3-ಎಸ್ ಜೆ ಪಿ ಐಟಿಐ ಸಂಸ್ಥೆ ೩೧ನೇ ವಾರ್ಷಿಕೋತ್ಸವ- June 3-SJP ITI Institute 31st Anniversary
ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ, ಶ್ರೀ ಜಗದ್ಗುರು ಪಂಚಾಚಾರ್ಯ ಕೈಗಾರಿಕಾ ತರಬೇತಿ ಸಂಸ್ಥೆಯ ೩೧ನೇ ವರ್ಷದ ವಾರ್ಷಿಕೋತ್ಸವ ಉಚಿತ ವೀರಶೈವ ಲಿಂಗಾಯಿತ ವಧು-ವರರ ಸಮಾವೇಶವನ್ನು ಜೂನ್ ೩ರಂದು ಸಹ್ಯಾದ್ರಿ ಕಾಲೇಜಿನ ಹಿಂಭಾಗದ ಬೈಪಾಸ್ ರಸ್ತೆಯಲ್ಲಿರುವ ತರಬೇತಿ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತರಬೇತಿ ಸಂಸ್ಥೆಯ ಸಂಸ್ಥಾಪಕ ವಿಘ್ನೇಶ್ವರಯ್ಯ ಸೋಲಾಪುರ ತಿಳಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನಿಧ್ಯದಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ನಡೆಯಲಿದೆ ಎಂದರು. ಅಂದು ಬೆಳಿಗ್ಗೆ ೮ ಗಂಟೆಯಿಂದ ನಿಧಿಗೆಯಲ್ಲಿರುವ ಟಿಎಂಎಇಎಸ್ ಆಯುರ್ವೇದ ಮಹಾ ವಿದ್ಯಾಲಯದ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ನಂತರ ಮಧ್ಯಾಹ್ನ ೧ ಗಂಟೆಗೆ ವೀರಶೈವ ಲಿಂಗಾಯಿತ ವಧು-ವರರ ಸಮಾವೇಶ ಜರುಗಲಿದೆ. ಮಳಲಿ ಹಾಗೂ ಕಡೇನಂದಿಹಳ್ಳಿ ಶ್ರೀಗಳು ನೇತೃತ್ವ ವಹಿಸಲಿದ್ದು, ಬಿದಿರೆಯ ವೀರಸಂಗಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಬಸವ ಕೇಂದ್ರದ ಅಧ್ಯಕ್ಷ ಜಿ. ಬೆನಕಪ್ಪ, ನ್ಯಾಯವಾದಿ ಹೆಚ್.ಎಂ. ಪೂರ್ಣಿಮಾ, ಸಮಾಜದ ಮುಖಂಡ ಉಮೇಶ್ ಹಿರೇಮಠ್, ಜಿಲ್ಲಾ ಜಂಗಮ ಮಹಿಳಾ ಸಮಾಜದ ಅಧ್ಯಕ್ಷ ಹೆಚ್.ಎಂ. ಪ್ರೇಮಾ, ಸೃಷ್ಟಿ ಮಹಿಳಾ ಸಮಾಜದ ಅಧ್ಯಕ್ಷೆ ರತ್ನಾ ಮಂಜುನಾಥ್ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕ ಎಸ್.ಎನ್. ಚನ್ನಬಸಪ್ಪ, ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಗಾಜನೂರಿನಲ್ಲಿರುವ ಸರ್ಕಾರಿ ಮಹಿಳಾ ಐಟಿಐ ಕಾಲೇಜಿನ ಪ್ರಾಂಶುಪಾಲ ಬಿ.ಟಿ. ಶೇಖರಪ್ಪ ಹಾಗೂ ಇನ್ನಿತರರ ಭಾಗವಹಿಸಲಿದ್ದಾರೆ ಎಂದರು.ಈ ಸಮಾರಂಭದಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ. ಶೇಖರ್, ಫರ್ಫೆಕ್ಟ್ ಅಲಾಯ್ಸ್ನ ಹೆಚ್.ಆರ್. ಮಂಜುನಾಥ್, ಶ್ರೀ ಜಗದ್ಗುರು ರಂಭಾಪುರಿ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಹೆಚ್. ಬಾಳನಗೌಡ್ರು ಅವರನ್ನು ಸನ್ಮಾನಿಸಲಾಗುವುದು, ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ತರಬೇತಿ ಸಂಸ್ಥೆಯ ಸಿಬ್ಬಂದಿಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.
ಸಂಜೆ ೫.೩೦ರಿಂದ ಎಸ್ಜೆಪಿಐಟಿಐ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯ ಡಿ.ಎನ್. ಪರಮೇಶ್ವರಪ್ಪ ವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಾಗರಾಜ ಬೆಳಕೇರಿಮಠ, ಡಿ.ಎನ್. ಪರಮೇಶ್ವರಪ್ಪ, ಜಿ.ಎಂ. ಮಲ್ಲಿಕಾರ್ಜುನ ಸ್ವಾಮಿ, ವೀರಸಂಗ್ಯ ಬಿದರೆ ಉಪಸ್ಥಿತರಿದ್ದರು.
ಬೆಳಿಗ್ಗೆ ೧೦ ಗಂಟೆಗೆ ಶ್ರೀ ರಂಭಾಪುರಿ ಜಗದ್ಗುರುಗಳವರನ್ನು ಎಂಆರ್ಎಸ್ ವೃತ್ತದಿಂದ ಸಂಸ್ಥೆಯ ಆವರಣದವರೆಗೆ ವಿವಿಧ ವಾದ್ಯ ವೈಭವಗಳೊಂದಿಗೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗುವುದು. ನಂತರ ಶ್ರೀಗಳ ಸಾನಿಧ್ಯದಲ್ಲಿ ವಾರ್ಷಿಕೋತ್ಸವ ನಡೆಯಲಿದ್ದು, ಮಳಲಿ ಸಂಸ್ಥಾನ ಮಠದ ಶ್ರೀ ಡಾ. ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಕಡೇನಂದಿಹಳ್ಳಿ ಕ್ಷೇತ್ರದ ಶ್ರೀ ರೇವಣ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ.
- ವಿಘ್ನೇಶ್ವರಯ್ಯ ಸೋಲಾಪುರ, ತರಬೇತಿ ಸಂಸ್ಥೆಯ ಸಂಸ್ಥಾಪಕ
SJP ITI Institute 31st Anniversary