SUDDILIVE || SHIVAMOGGA
ಕಾಲ್ತುಳಿತ ಪ್ರಕರಣದಲ್ಲಿ ಸಿಎಂ ಡಿಸಿಎಂ ಹಾಗೂ ಗೃಹಸಚಿವರ ವಿರುದ್ಧ ಕ್ರಮಕ್ಕೆ ಎಬಿವಿಪಿ ಆಗ್ರಹ-ABVP demands action against CM, DCM and Home Minister in stampede case
ಆರ್ ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಪ್ರಕರಣ ಸರ್ಕಾರದ ವಿವೇಚನೆ ರಹಿತ ತೀರ್ಮಾನವೆಂದು ಎಬಿವಿಪಿ ಆಕ್ರೋಶ ವ್ಯಕ್ತಪಡಿಸಿದೆ. ಎಬಿವಿಪಿ ರಾಜ್ಯ ಕಾರ್ಯದರ್ಶಿ ಪ್ರವೀಣ್ ನೇತೃತ್ವದಲ್ಲಿ ತಹಸಿಲ್ದಾರ್ ರಾಜು ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
18 ವರ್ಷಗಳ ನಂತರ ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡಕ್ಕೆ ಸನ್ಮಾನಿಸಲು ವಿಧಾನಸೌಧದ ಭದ್ರತಾ ವಿಭಾಗದ ಗೌಡ ರವರ ಎಚ್ಚರಿಕೆ ನಡುವೆಯೂ ವಿಧಾನಸೌಧ ಮೆಟ್ಟಿಲುಗಳ ಮೇಲೆ ಸನ್ಮಾನ ಕಾರ್ಯಕ್ರಮದ ಆತುರದ ಯೋಚನೆ ಮತ್ತು ವ್ಯವಸ್ಥಿತ ತಯಾರಿ ಇಲ್ಲದೆ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಯ ಆಯೋಜನೆ ಪರಿಣಾಮ 11 ಯುವಕರ ಸಾವಾಗಿದೆ ಇದು ನಾಡಿನ ದುರ್ದೈವ ಎಂದು ಸಂಘಟನೆ ಆರೋಪಿಸಿದೆ.
ಇದೇ ಸಂದರ್ಭದಲ್ಲಿ ಪ್ರಕರಣದ ಸೂಕ್ತ ತನಿಖೆ ನಡೆಸದೆ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳ ಆತ್ಮಸ್ಥೈರ್ಯ ಕುಂದಿಸುವಂತಹ ಮತ್ತು ಅವರ ಸಾಮರ್ಥ್ಯವನ್ನು ಪ್ರಶ್ನಿಸುವಂತಹ ಅಮಾನತ್ತು ಆದೇಶವನ್ನು ಹಿಂಪಡೆಯಬೇಕು ಈ ದುರ್ಘಟನೆಯ ನೈತಿಕ ಹೊಣೆಗಾರಿಕೆಯಿಂದ ನುಡಿಸಿಕೊಳ್ಳದಂತೆ ರಾಜ್ಯ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿ ಪರಿಷತ್ ಆಗ್ರಹ ವ್ಯಕ್ತಪಡಿಸಿದೆ
ABVP demands action against CM, DCM