ಹಿಂದೂ ಕಾರ್ಯಕರ್ತರ ಮಾನವ ಹಕ್ಕುಗಳ ಉಲ್ಲಂಘನೆ ಮಾಡಿರುವ ಪೊಲೀಸರ ವಿರುದ್ಧ ಕ್ರಮ ಜರುಗಿಸುವಂತೆ ಮನವಿ-Appeal to take action against police

 SUDDILIVE || SHIVAMOGGA

ಹಿಂದೂ ಕಾರ್ಯಕರ್ತರ ಮಾನವ ಹಕ್ಕುಗಳ ಉಲ್ಲಂಘನೆ ಮಾಡಿರುವ ಪೊಲೀಸರ ವಿರುದ್ಧ ಕ್ರಮ ಜರುಗಿಸುವಂತೆ ಮನವಿ-Appeal to take action against police for violating human rights of Hindu activists

Action, police

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ಕಿರುಕುಳ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ವಿಷಯದಲ್ಲಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಇಂದು ಸಂಘಟನೆ ಮತ್ತು ಸಾಂಪ್ರದಾಯಗಳ ಸಂಘಟಿತ ಶಕ್ತಿ ಇಂದು ರಾಷ್ಟ್ರ ಸಮನ್ವಯ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಪೊಲೀಸರು ಕಳೆದ ಒಂದುವಾರದಿಂದ ಕೋಮು ಸೌಹಾರ್ದವನ್ನು ಕಾಪಾಡುವ ನೆಪದಲ್ಲಿ ಇಂದು ಕಾರ್ಯಕರ್ತರನ್ನು ಗುರಿಯಾಗಿಸಿ, ಹಿಂದೂ ಕಾರ್ಯಕರ್ತರ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಮಾಡುತ್ತಿದ್ದಾರೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆ ಮೇರೆಗೆ ಹಿಂದೂ ಕಾರ್ಯಕರ್ತರಿಗೆ ಪೊಲೀಸ್ ವಿಚಾರಣೆಯ ನೆಪದಲ್ಲಿ ಸ್ಥಳೀಯ ಪೊಲೀಸ್ ಠಾಣೆಯಿಂದ ಮಧ್ಯರಾತ್ರಿ ದೂರವಾಣಿ ಕರೆ ಮಾಡಿ ನೋಟಿಸ್ ನೀಡದೆ ವಿಚಾರಣೆಗೆ ಪೊಲೀಸ್ ಠಾಣೆಗೆ ಕರೆದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರವು ಉನ್ನತ ಮಠದ ತನಿಖೆಯನ್ನು ಮಾಡಬೇಕೆಂದು ಸಂಘಟಿತ ಶಕ್ತಿ ಮತ್ತು ಸಮನ್ವಯ ಸಮಿತಿ ಮನವಿಯಲ್ಲಿ ಆಗ್ರಹಿಸಿದೆ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಮಾನವ ಹಕ್ಕುಗಳು ಉಲ್ಲಂಘನೆ ಮಾಡಿದ ವಿಷಯದಲ್ಲಿ ಉನ್ನತ ಮಟ್ಟದ ತನಿಖೆಯನ್ನು ಮಾಡಬೇಕು. ಪ್ರಕರಣದಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಪ್ರಕರಣದಲ್ಲಿ ನೀಡಿದ ನಿರ್ದೇಶನದಂತೆ ನಡೆದುಕೊಳ್ಳಬೇಕು. ಪೊಲೀಸರಿಂದ ಕಿರುಕುಳಕ್ಕೆ ಒಳಗಾದ ಹಿರಿಯ ನಾಗರಿಕರಿಗೆ ಪರಿಹಾರವನ್ನು ನೀಡಬೇಕು ಮತ್ತು ಸಂಬಂಧಿತರಿಂದ ಲಿಖಿತ ಕ್ಷಮಾಪಣೆ ಪಡೆಯಬೇಕು.

ಪೊಲೀಸರು ಈ ಪ್ರಕರಣದಲ್ಲಿ ಸ್ವಯಂ ಪ್ರೇರಿತವಾಗಿ ಗಮನ ಹರಿಸಿ ಸೂಕ್ತ ತನಿಖೆಗೆ ಕ್ರಮ ಜರುಗಿಸಬೇಕು. ಪ್ರಕರಣದ ಮೇಲೆ ನಿಗಾ ಇಡಬೇಕು, ಮಾನಸಿಕ ಕಿರುಕುಳ ನೀಡುವ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮಾಡುವ ಪೊಲೀಸರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಂಡು ಪೀಡಿತರಿಗೆ ನ್ಯಾಯ ಒದಗಿಸಬೇಕು. ಜಿಲ್ಲೆಯಲ್ಲಿ ಹಿಂದೂ ನಾಯಕರಿಗೆ ಬಂದಿರುವ ಜೀವ ಬದುರಿಕೆಗಳ ಬಗ್ಗೆ ತಕ್ಷಣ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಿಂದೂ ನಾಯಕರಿಗೆ ಸೂಕ್ತ ರಕ್ಷಣೆ ನೀಡಬೇಕು. 

ಅಬ್ದುಲ್ ರೆಹಮಾನ್ ಶವಯಾತ್ರೆ ವೇಳೆ ನಡೆದ ಬಲವಂತ ಮಾಧ್ಯಮದ ಮೇಲಿನ ಮೇಲೆ ಕಲ್ಲುತೂರಾಟದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಪಿಎಫ್ ಐ ಸಂಘಟನೆಯ ಸದಸ್ಯರು ಅನ್ಯ ಸಂಘಟನೆಯ ಮೂಲಕ ಸಕ್ರಿಯವಾಗಿದ್ದು ಪ್ರಕರಣದಲ್ಲಿ ಅವರ ಕೈವಾಡ ಇರುವ ಶಂಕೆ ಇದ್ದು ಸುಭಾಶೆಟ್ಟಿ ಪ್ರಕರಣವನ್ನು ಓರ್ವ ಪಿಎಸ್ಐ ಅಧಿಕಾರಿ ನೇತೃತ್ವದಲ್ಲಿ ತನಿಖೆಯನ್ನು ಮಾಡಿ ಈ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಕುಮ್ಮಕ್ಕು ನೀಡಿದ ಸಹಕರಿಸಿದ ಎಲ್ಲರ ಬಂಧನ ವಾಗಬೇಕು. ಪಿಎಸ್ ಐ ಮೇಲಿನ ನಿಷೇಧವನ್ನು ತೀವ್ರವಾಗಿ ಜಾರಿಗೆ ತಂದು ಸಕ್ರಿಯ ಸದಸ್ಯರ ಮೇಲೆ ಕಠಿಣ ಕ್ರಮಗಿಸಬೇಕು.

ಕೋಮು ಹಿಂಸೆಯನ್ನು ಪ್ರಚೋದನೆ ಮಾಡುವ ಎಸ್ ಡಿ ಪಿ ಮುಖಂಡರಾದ ರಿಯಾಜ್ ಪರಂಗಿಪೇಟೆ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಬು ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಮುಂತಾದವರ ಮೇಲೆ ದ್ವೇಷ ಭಾಷಣದ ಪ್ರಕರಣವನ್ನು ದಾಖಲಿಸಬೇಕು ಮತ್ತು ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಮನವಿಯಲ್ಲಿ ಒತ್ತಾಯಿಸಲಾಯಿತು.

ನ್ಯಾಯವಾದಿ ಪ್ರದೀಪ್ ಕುಮಾರ್ ಎಸ್ ನ್ಯಾಯವಾದಿ ವಾಗೀಶ್ ನ್ಯಾಯವಾದಿ ವಿನಾಯಕ,  ಹಿರೇಶ್ ನಾಯಕ್ ಭಗತ್ ಸೇನೆ, ನ್ಯಾಯವಾದಿ ಪ್ರವೀಣ್, ಆನಂದ್ ರಾವ್ ವಿಶ್ವ ಎಂದು ಪರಿಷತ್, ವಿಜಯ ರೇವಣಕರ್ ಹಿಂದೂ ಜನಜಾಗೃತಿ ಸಮಿತಿ ದೀನ್ ದಯಾಳ್ ಭಜರಂಗದಳ ನ್ಯಾಯವಾದಿ ಶಾಂತಕುಮಾರ್ ಶಾಮ್ ಸುಂದರ್ ಪ್ರದೀಪ್ ಕುಮಾರ್ ಇಂದು ಜಾಗರಣ ವೇದಿಕೆಯ ಕಾರ್ಯಕರ್ತರು ಮನವಿ ನೀಡುವ ಸಂದರ್ಭದಲ್ಲಿ ಭಾಗಿಯಾಗಿದ್ದರು. 

Appeal to take action against police

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close