SUDDILIVE || SHIVAMOGGA
ಶಾಸಕ ಬಂಡೀಸಿದ್ದೇಗೌಡರನ್ನ ವಜಾಗೊಳಿಸುವಂತೆ ಆಗ್ರಹ-Demand to dismiss MLA Bandisidde Gowda
ಮುಸ್ಲಿಂ ವಿರೋಧಿ ಶಾಸಕ ರಮೇಶ್ ಬಂಡಿಸಿದ್ದೇಗೌಡನನ್ನು ಕಾಂಗ್ರೆಸ್ ಪಕ್ಷದಿಂದ ವಜಾ ಮಾಡುವಂತೆ ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣ ವೇದಿಕೆ ಜಿಲ್ಲಾ ಘಟಕ ಆಗ್ರಹಿಸಿದೆ.
ಮುಸ್ಲಿಂ ಸಮಾಜದ ಬೆಂಬಲದಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದ ಶಾಸಕ ರಮೇಶ್ ಬಂಡಿ ಸಿದ್ದೇಗೌಡರವರು ಬಗರ ಹುಕುಂ ಅರ್ಜಿಗಳ ವಿಚಾರವಾಗಿ ಮಾತನಾಡುತ್ತಾ ಮುಸ್ಲಿಂ ಸಮುದಾಯವನ್ನು ಕುರಿತು ಅವಹೇಳನಕಾರಿಯಾಗಿ ಮಾತನಾಡುತ್ತಾರೆ.
ಇದರಿಂದ ಮುಸ್ಲಿಂ ಸಮುದಾಯಕ್ಕೆ ಅತೀವ ನೋವು ಉಂಟಾಗಿದೆ. ಶಾಸಕರಾಗಿ ಈ ರೀತಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿಯೂ ಕೋಮುವಾದಿ ಮನಸ್ಥಿತಿಯ ಮುಸ್ಲಿಂ ವಿರೋಧಿಗಳಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ ಸಂಘಟನೆಯ ಎಂದು ಸಂಘಟಬೆಯ ಜಿಲ್ಕಾಧ್ಯಕ್ಷ ಸೈಯದ್ ಮುಜೀಬ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಇವತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ ಎಂದರೆ ಅದಕ್ಕೆ ಮುಸ್ಲಿಂ ಸಮುದಾಯ ಪ್ರಮುಖ ಕಾರಣ. ಚುನಾವಣೆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ನೀಡಿದಂತಹ ಭರವಸೆಗಳನ್ನು ಈಡೇರಿಸುವಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ವಿಫಲವಾಗಿದೆ. ಸಾಮಾಜಿಕ ನ್ಯಾಯದಡಿಯಲ್ಲಿ ಮುಸ್ಲಿಂ ಜನಾಂಗಕ್ಕೆ ನಿಗಮ ಮಂಡಳಿಗಳಲ್ಲಿ ಸೇರಿದಂತೆ ಸರ್ಕಾರದಲ್ಲಿ ನೀಡಬೇಕಾದಂತಹ ಸ್ಥಾನಮಾನಗಳನ್ನು ಕಾಂಗ್ರೆಸ್ ಪಕ್ಷ ಈವರೆಗೂ ನೀಡಿಲ್ಲ.
ಕಾಂಗ್ರೆಸ್ ಪಕ್ಷಕ್ಕೆ ನಿಜವಾಗಿಯೂ ಜಾತ್ಯತೀತ ಸಿದ್ಧಾಂತದಲ್ಲಿ ನಂಬಿಕೆ ಇದ್ದರೆ ತಕ್ಷಣವೇ ರಮೇಶ್ ಬಂಡಿಸಿದ್ದೇಗೌಡರವರನ್ನು ಕಾಂಗ್ರೆಸ್ ಪಕ್ಷದಿಂದ ವಜಾ ಮಾಡಬೇಕು ಎಂದು ವೇದಿಕೆಯು ಆಗ್ರಹಿಸಿದೆ. ಅಲ್ಲದೆ ಕಾಂಗ್ರೆಸ್ ಪಕ್ಷದ ನಾಯಕರ ಇದೇ ರೀತಿಯ ವರ್ತನೆ ಮುಂದುವರೆದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಗಳ ಎದುರುಗಡೆ ಉಗ್ರ ಪ್ರತಿಭಟನೆಯನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ಮುಜೀಬ್ ನೀಡಿದ್ದಾರೆ.
Demand to dismiss MLA Bandisidde Gowda