SUDDILIVE || SHIVAMOGGA
ಕಾಂತಾರ ಶೂಟಿಂಗ್ ವೇಳೆ ಜಲಾಶಯದಲ್ಲಿ ಮಗುಚಿದ ದೋಣಿ-Boat capsizes in reservoir during Kantara shooting
ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನ ಮಾಡುತ್ತಿರುವ ಕಾಂತಾರ-1 ಚಿತ್ರದ ಶೂಟಿಂಗ್ ವೇಳೆ ಜಲಾಶಯದಲ್ಲಿ ದೋಣಿ ಮಗುಚಿದ ಘಟನೆ ಶನಿವಾರ(ಜೂ14) ನಡೆದಿರುವ ಬಗ್ಗೆ ಹಲವು ಮಾಧ್ಯಮಗಳು ವರದಿ ಮಾಡಿವೆ. ಅದೃಷ್ಟವಶಾತ್ ಚಿತ್ರ ತಂಡದ ಎಲ್ಲರೂ ಸುರಕ್ಷಿತವಾಗಿ ದಡ ಸೇರಿದ್ದಾರೆ ಎಂದು ವರದಿಯಾಗಿದ್ದು ಈ ಬಗ್ಗೆ ಯಾವುದೇ ಖಚಿತತೆ ಇಲ್ಲದಿರುವುದು ಅಚ್ಚರಿ ಮೂಡಿಸಿದೆ.
ಚಿತ್ರದ ಕೊನೆಯ ಹಂತದ ಶೂಟಿಂಗ್ ಗಾಗಿ ತೀರ್ಥಹಳ್ಳಿಯ ಮಾಣಿ ಜಲಾಶಯದ ಬಳಿ 15 ದಿನಗಳ ಕಾಲ ಶೂಟಿಂಗ್ ನಡೆಸಲಾಗುತ್ತಿತ್ತು. ಶೂಟಿಂಗ್ ನಡೆಸುತ್ತಿದ್ದ ವೇಳೆ ದೋಣಿ ಮಗುಚಿದೆ ಎಂದು ಹೇಳಲಾಗಿದ್ದು, ನಟ ರಿಷಬ್ ಶೆಟ್ಟಿ ಸೇರಿದಂತೆ 30 ಮಂದಿ ಸ್ಥಳದಲ್ಲಿದ್ದರು ಎನ್ನುವ ಮಾಹಿತಿ ಲಭಿಸಿದೆ. ಕೆಮರಾ ಮತ್ತು ಇತರ ಸಾಮಗ್ರಿಗಳು ನೀರು ಪಾಲಾಗಿವೆ ಎಂದು ಹೇಳಲಾಗಿದೆ.
ಈಗಾಗಲೇ ಚಿತ್ರದಲ್ಲಿ ಅಭಿನಯಿಸುತ್ತಿದ್ದ ಮೂವರು ಕಲಾವಿದರ ನಿಧನ ಚಿತ್ರ ತಂಡಕ್ಕೆ ಶಾಕ್ ಆಗಿ ಪರಿಣಮಿಸಿತ್ತು. ಘಟನೆಯಲ್ಲಿ ಓರ್ವನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮಾಹಿತಿಗಳು ಲಭ್ಯವಾಗುತ್ತಿದ್ದರು ಸಹ ಈ ಘಟನೆ ಕುರಿತು ಯಾವುದೇ ಸ್ಪಷ್ಟ ಮಾಹಿತಿ ಇಲ್ಲವಾದರೂ ಮಾಧ್ಯಮಗಳು ಸುದ್ದಿ ಮಾಡಿವೆ.
ಆದರೆ ಸ್ಥಳೀಯ ಪೊಲೀಸ್ ಠಾಣೆಗೆ ಈ ಘಟನೆ ಕುರಿತು ಯಾವುದೇ ಮಾಹಿತಿ ಇಲ್ಲವೆಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
during Kantara shooting