SUDDILIVE || SHIVAMOGGA
ಸಹ್ಯಾದ್ರಿ ಕಾಲೇಜಿನ ಆಡಳಿತ ಮಂಡಳಿ ವಿರುದ್ಧವೇ ದೂರು ದಾಖಲಾಗಬೇಕು-ಕೆಆರ್ ಎಸ್ ಪಕ್ಷ ಮನವಿ-KRS party appeal: Complaint should be filed against Sahyadri collage administration
ಸಹ್ಯಾದ್ರಿ ಕಾಲೇಜಿನಲ್ಲಿ ಎರಡು ಶ್ರೀಗಂಧದ ಮರ ಪತ್ತೆಯಾದ ಬೆನ್ನಲ್ಲೇ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಉಂಬ್ಳೇಬೈಲು ವಲಯ ಅರಣ್ಯ ಅಧಿಕಾರಿಗಳಿಗೆ ಕಾಲೇಜು ಆಡಳಿತ ಮಂಡಳಿಯ ಎಸ್ಟೇಟ್ ವಿರುದ್ಧವೇ ದೂರು ದಾಖಲಾಗಬೇಕೆಂದು ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಲ್ಲಿ ನಡೆದಂತಹ ಶ್ರೀಗಂಧ ಮರ ಹಾಗೂ ಇತರ ಜಾತಿ ಪ್ರಭೇದದ ಮರಗಳನ್ನು ಕಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯ ಎಸ್ಟೇಟ್ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ಹಾಗೂ ಯಾವುದೇ ಆಮಿಷಗಳಿಗೆ, ಹಾಗೂ ಯಾವುದೇ ರಾಜಕೀಯ ಪ್ರಭಾವಗಳಿಗೆ ಒಳಗಾಗದೆ ಪ್ರಾಮಾಣಿಕತೆಯಿಂದ ತನಿಖೆ ನಡೆಸಿ ಗಂಧದ ಮರ ಕಡೆದ ಆರೋಪಿಗಳಿಗೆ ಶಿಕ್ಷೆ ಯಾಗುವಂತೆ. ಉಂಬಳೇ ಬೈಲು ವಲಯ ಅರಣ್ಯಾಧಿಕಾರಿಗಳಿಗೆ ಈ ದಿನ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಸಾಕ್ಷಿ ಸಹಿತ ದೂರು ಸಲ್ಲಿಸಲಾಯಿತು.
KRS party appeal