SUDDILIVE || SINDANOOR
ಸಧೃಢತೆಯ ಬೆನ್ನಲ್ಲೇ ಕೇಂದ್ರ ಸಚಿವರನ್ನ ಭೇಟಿ ಮಾಡಿದ ಸಂಸದರು-MPs meet Union Ministers in pursuit of stability
ಮಲೆನಾಡ ಹಚ್ಚ ಹಸಿರಿನ ರಾಜಧಾನಿ ಶಿವಮೊಗ್ಗ ಜಿಲ್ಲೆ ಹಲವಾರು ವಿಶೇಷತೆಗಳಿಂದ ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿದೆ. ಅದರಲ್ಲೂ ವಿಶೇಷವಾಗಿ ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನ ಅಂಬಾರಗೋಡ್ಲು - ಕಳಸವಳ್ಳಿ ನಡುವೆ ಸಾಗುವ ಹಾದಿಗೆ ನಿರ್ಮಾಣ ಮಾಡಿರುವ ಸಿಗಂದೂರು ಸೇತುವೆ ಒಂದು ಹೊಸ ಮೈಲಿಗಲ್ಲು.
ನವನವೀನ ತಂತ್ರಜ್ಞಾನ ಹಾಗೂ ಆಧುನಿಕ ತಾಂತ್ರಿಕ ವ್ಯವಸ್ಥೆಯಿಂದ ಅತ್ಯಂತ ಅಚ್ಚುಕಟ್ಟಾಗಿ ಸುಮಾರು 430.00 ಕೋಟಿ ಅನುದಾನದಲ್ಲಿ ರಾಜ್ಯದ ಅತಿ ಉದ್ದದ 2.25 ಕಿ.ಮೀ ಕೇಬಲ್ ಆಧಾರಿತ ಸೇತುವೆ ಕಾಮಗಾರಿ ಸಾರ್ವಜನಿಕ ಸೇವೆಗೆ ಅಡಿ ಇಡಲು ಸಜ್ಜಾಗಿದೆ.
ಸಾರ್ವಜನಿಕ ಸದ್ಬಳಕೆಗೆ ಅನುಕೂಲ ಮಾಡಿಕೊಡುವ ನಿಮಿತ್ತ ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಪಡಿಸುವಂತೆ ಮಾನ್ಯ ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಇಂದು ದೆಹಲಿಯಲ್ಲಿ ಸಂಸದ ರಾಘವೇಂದ್ರ ಭೇಟಿ ಮಾಡಿ ಮನವಿ ಮಾಡಿದ್ದು, ಇನ್ನೊಂದು ವಾರದಲ್ಲಿ ಉದ್ಘಾಟನಾ ದಿನಾಂಕ ನಿಗದಿಯಾಗುವ ನಿರೀಕ್ಷೆ ಇದೆ. ನಿನ್ನೆ ತಾನೆ ಸೇತುವೆಯ ಸಧೃಡತೆಯ ಬಗ್ಗೆ ಪರೀಕ್ಷೆ ನಡೆದಿದ್ದು, ಅದರ ಸರ್ಟಿಫಿಕೇಟ್ ಕೈಸೇರಬೇಕಿದೆ. ಈ ಮಧ್ಯೆ ಸಂಸದರು ಕೇಂದ್ರ ಸಚಿವರ ಭೇಟಿಸಹ ಉದ್ಘಾಟನೆಯ ಸಿದ್ಧತೆಗೆ ಬಲಕೊಟ್ಟಿದೆ.
ಈ ಒಂದು ಇತಿಹಾಸ ಪುಟಗಳಲ್ಲಿ ದಾಖಲಾಗುವಂತ ಐತಿಹಾಸಿಕ ಸೇತುವೆ ನಿರ್ಮಾಣದಿಂದ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಮೆರುಗು ದೊರೆಯುತ್ತದೆ. ಜೊತೆಗೆ ವ್ಯಾವಹಾರಿಕವಾಗಿ ಜಿಲ್ಲೆಯ ಆರ್ಥಿಕ ಪರಿಸ್ಥಿತಿ ಸದೃಢವಾಗುತ್ತದೆ. ಈ ಮೂಲಕ ಹೊಸ ರೀತಿಯ ಸಾಮಾಜಿಕ ಬದಲಾವಣೆಗೆ ಮುನ್ನುಡಿ ಬರೆಯುತ್ತದೆ ಎಂಬ ವಿಶ್ವಾಸ ಬಲವಾಗಿದೆ ಎಂದು ಸಂಸದರು ಪೋಸ್ಟ್ ಮಾಡಿಕೊಂಡಿದ್ದಾರೆ.
MPs meet Union Ministers in pursuit of stability