SUDDILIVE || SHIVAMOGGA
ವಿಚ್ಛೇಧೀತ ಪತ್ನಿ ಮತ್ತು ಆಕೆಯ ತಾಯಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗೆ ಶಿಕ್ಷೆ-Man sentenced for fatally attacking estranged wife and her mother
ವಿಚ್ಚೆದಿತ ಪತ್ನಿ ಮತ್ತು ಆಕೆಯ ತಾಯಿಯ ಮೇಕೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಘಟನೆ ವಿಚಾರದಲ್ಲಿದ್ದ ಆರೋಪಿಗೆ ಎರಡು ವರೆ ವರ್ಷ ಕಾರಾಗೃಹ ಶಿಕ್ಷೆ ಮತ್ತು 20 ಸಾವಿರ ರೂ. ಹಣ ದಂಡ ವಿಧಿಸಿ ಘನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ರಾಘವೇಂದ್ರ, 38 ವರ್ಷ, ವಿಧ್ಯಾನಗರ ಶಿವಮೊಗ್ಗ ಟೌನ್ ಈತನು, ತನ್ನ ಹೆಂಡತಿಯೊಂದಿಗೆ ವಿಚ್ಛೇದನ ಮಾಡಿಕೊಂಡಿದ್ದು, ಇಬ್ಬರೂ ಪ್ರತ್ಯೇಖವಾಗಿ ವಾಸವಿರುತ್ತಾರೆ. ಆದರೆ ಆರೋಪಿ ರಾಘವೇಂದ್ರನು ತನ್ನ ಹೆಂಡತಿಯ ಮನೆಗೆ ಹೋಗಿ ಹೆಂಡತಿ ಮಕ್ಕಳು ಮತ್ತು ಆಕೆಯ ತಾಯಿಯ ಜೊತೆಗೆ ಆಗ್ಗಾಗ್ಗೆ ಗಲಾಟೆ ಮಾಡುತ್ತಿದ್ದು, ಹಳೆ ದ್ವೇಶದ ಹಿನ್ನೆಲೆಯಲ್ಲಿ ದಿನಾಂಕಃ 02-06-2017 ರಂದು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನಗುಡಿ ಯಲ್ಲಿರುವ ತನ್ನ ಹೆಂಡತಿಯ ಮೆನಗೆ ಹೋಗಿ ಆಕೆ ಮತ್ತು ಆಕೆಯ ತಾಯಿಯನ್ನು ಕೊಲೆ ಮಾಡುವ ಉದ್ದೇಶದಿಂದ ಚಾಕು ವಿನಿಂದ ಮಾರಣಾಮತಿಕ ಹಲ್ಲೆ ಮಾಡಿರುವ ಘಟನೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಇಮ್ರಾನ್ ಬೇಗ್, ಪಿಎಸ್ಐ (ಹಾಲಿ ಪೊಲೀಸ್ ನಿರೀಕ್ಷಕರು ತೀರ್ಥಹಳ್ಳಿ ಪೊಲೀಸ್ ಠಾಣೆ) ರವರು ಪ್ರಕರಣದ ತನಿಖೆ ಪೂರೈಸಿ ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.
ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಶ್ರೀ ಶಾಂತರಾಜ್, ಸರ್ಕಾರಿ ಅಭಿಯೋಜಕರವರು, ವಾದ ಮಂಡಿಸಿದ್ದು, ಘನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿಯ ವಿರುದ್ಧ ಆರೋಪ ದೃಡ ಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಶ್ರೀ ಯಶವಂತ್ ಕುಮಾರ್ ರವರು ದಿನಾಂಕಃ 18-06-2025 ರಂದು ಪ್ರಕರಣದ ಆರೋಪಿತನಾದ ರಾಘವೇಂದ್ರ, ಶಿವಮೊಗ್ಗ ಜಿಲ್ಲೆ ಈತನಿಗೆ 2 ವರ್ಷ ಸಾಧಾ ಕಾರಾಗೃಹವಾಸ ಶಿಕ್ಷೆ ಮತ್ತು ರೂ 20,000/- ದಂಡ ವಿಧಿಸಿ ಆದೇಶಿಸಿರುತ್ತಾರೆ.
Man sentenced for fatally attacking