SUDDILIVE || SHIVAMOGGA
ಖಾಸಗಿ ಬಸ್ ಮತ್ತು ಕಾರಿನ ನಡುವೆ ಅಪಘಾತ, ಓರ್ವ ಸಾವು 8 ಜನರಿಗೆ ಗಾಯ-One dead, 8 injured in accident between private bus and car
ಬೆಳ್ಳಂಬೆಳಗ್ಗೆ ಬಸ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿರುವ ಘಟನೆ ನಗರದ ಸಾವರ್ ಲೈನ್ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರ ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್ಎಲ್ಆರ್ ರಸ್ತೆಗೆ ಬಂದಾಗ ಕಾರಿಗೆ ಡಿಕ್ಕಿ ಹೊಡಿದಿದೆ. ಢಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಪ್ರದೀಪ್ ಎಂಬಾತ ಮೃತಪಟ್ಟಿದ್ದಾನೆ. ಬಸ್ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು ಎಲ್ಲರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಧ್ಯಕ್ಕೆ ಮೆಗ್ಗಾನ್ ನಲ್ಲಿ ಇಬ್ಬರು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದ ಆರು ಜನ ಸರ್ಜಿ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ. ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿವೇಕ ಟ್ರಾವೆಲ್ಸ್ ಬಸ್ ಮತ್ತು ಕಾರಿನ ನಡುವೆ ಇಂದು ಬೆಳಿಗ್ಗೆ 5-15 ರ ಸಮಯದಲ್ಲಿ ಸುಮಾರಿಗೆ ನಡೆದಿದೆ. ರಸ್ತೆ ಕಿರಿದಾಗಿದ್ದು ದೊಡ್ಡ ವಾಹನಗಳು ನಿಧಾನವಾಗಿ ಚಲಿಸದ ಹಿನ್ನಲೆಯಲ್ಲಿ ಈ ಅಪಘಾತ ನಡೆದಿದೆ ಎಂಬುದು ಸ್ಥಳೀಯರ ಆರೋಪವಾಗಿದೆ.
One dead, 8 injured in accident