SUDDILIVE || SHIVAMOGGA
ವಿದ್ಯುತ್ ತಂತಿ ತುಳಿದು ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಸಾವು-Raitha sampark Center staff dies after stepping on electric wire
ತುಂಡಾಗಿ ಬಿದ್ದಿದ್ದ ವಿದ್ಯುತ್ ತುಳಿದು ನವವಿವಾಹಿತ ಸಾವು ಕಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆಜೋಳದಗುಡ್ಡೆ ಗ್ರಾಮದಲ್ಲಿ ಘಟನೆ ನಡೆದಿದೆ.
ಕಳೆದ ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತರಳುವಾಗ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹೋಳೆ ಜೋಳದಗುಡ್ಡೆ ಗ್ರಾಮದ ನಿವಾಸಿ ದೇವರಾಜ್ (೩೦) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಕೆಲಸ ಮುಗಿಸಿ ರಾತ್ರಿ ೮ ಗಂಟೆಗೆ ಮನೆಗೆ ತೆರಳುತ್ತಿದ್ದ ದೇವರಾಜ್ ತುಂಡಾಗಿ ಬಿದ್ದ ವಿದ್ಯುತ್ ತಂತಿ ಗಮನಿಸದೆ ತುಳಿದ ಹಿನ್ನಲೆಯಲ್ಲಿ ವಿದ್ಯುತ್ ಶಾಕ್ ನಿಂದ ಅಸ್ವಸ್ಥರಾಗಿ ಬಿದ್ದಿದ್ದಾರೆ. ನಂತರ ಸ್ಥಳೀಯರು ಗಮನಿಸಿ ಆಸ್ಪತ್ರೆಗೆ ರವಾನಿಸಿದರು ಯಾವುದೇ ಪ್ರಯೋಜನ ಆಗಿಲ್ಲ.
ಚಂದ್ರಗುತ್ತಿ ರೈತ ಸಂಪರ್ಕ ಕೇಂದ್ರದಲ್ಲಿ ದೇವರಾಜ್ ಕಾರ್ಯನಿರ್ವಹಿಸುತ್ತಿದ್ದರು. ಕಳೆದ 10 ದಿನಗಳ ಹಿಂದೆ ಅಷ್ಟೆ ದೇವರಾಜ್ ವಿವಾಹವಾಗಿದ್ದರು. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Raitha sampark Center staff dies after stepping on electric wire