SUDDILIVE || BHADRAVATHI
ರೈಲಿಗೆ ಸಿಲುಕಿ ಆತ್ಮಹತ್ಯೆ-Suicide by being hit by a train
ಭದ್ರಾವತಿಯ ಗುಂಡಪ್ಪ ಶೆಡ್ ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯ ಶವ ಒಂದು ಪತ್ತೆಯಾಗಿದ್ದು ಇದೊಂದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.
ರೈಲ್ವೆ ಹಳಿಯ ಮಧ್ಯೆ ವ್ಯಕ್ತಿಯ ಶವ ಪತ್ತೆಯಾಗಿದ್ದು, ಇಂದು ಬೆಳಿಗ್ಗೆ 4 ಗಂಟಗೆ ಬೆಂಗಳೂರಿನಿಂದ ತಾಳಗುಪ್ಪಕ್ಕೆ ತೆರಳುತ್ತಿದ್ದ ವೇಳೆ ವ್ಯಕ್ತಿ ರೈಲಿಗೆ ಸಿಲುಕಿ ಆತ್ಮಹತ್ಯೆಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡವನ ಬಳಿ ಹಣ ಮತ್ತು ಸಿಗರೇಟ್ ಪ್ಯಾಕೆಟ್ ವೊಞಮದು ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡವನ ಗುರುತು ಇನ್ನೂ ಪತ್ತೆಯಾಗಿಲ್ಲ. ಈತ ಸ್ಥಳೀಯನು ಅಲ್ಲ ಎಂಬುದಾಗಿ ಸ್ಥಳೀಯರೇ ಹೇಳುತ್ತಿದ್ದಾರೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Suicide by being hit by a train