SUDDILIVE || SHIVAMOGGA
ವಿಕಸಿತ ಭಾರತ ಸಂಕಲ್ಪ ಸಭೆಯಲ್ಲಿ ವಿಜೇಂದ್ರ ಭಾಗಿ-Vijendra participates in the vikasitha Bharath Sankalpa meeting
ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಂದ್ರ ಅವರ ಸ್ವಗೃಹದಲ್ಲಿಯೇ ವಿಕಸಿತ ಭಾರತ ಸಂಕಲ್ಪ ಸಭೆ ನಡೆದಿದೆ. ಸಭೆಯಲ್ಲಿ ಪ್ರತಿ ಮನೆಗಳಿಗೆ ತಲುಪಿ ಪ್ರಧಾನಿ ಮೋದಿಯವರ ಕಾರ್ಯಕ್ರಮದ ಬಗ್ಗೆ ವಿವರಿಸಲು ತೀರ್ಮಾನಿಸಲಾಯಿತು.
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ತೊಗರ್ಸಿ, ಸುಣ್ಣದ ಕೊಪ್ಪ, ಶಿರಾಳಕೊಪ್ಪ ಮಹಾ ಶಕ್ತಿಕೇಂದ್ರಗಳಲ್ಲಿ ಮಹಾ ಶಕ್ತಿಕೇಂದ್ರದಲ್ಲಿಂದು ವಿಕಸಿತ ಭಾರತದ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದೊಂದಿಗೆ ಸಾಗುತ್ತಿರುವ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ ಸರಕಾರಕ್ಕೆ 11 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೇಶದ ಹಾಗೂ ರಾಜ್ಯದ ಪ್ರತಿಯೊಂದು ಮನೆಗಳಲ್ಲೂ ಕೇಂದ್ರ ಸರ್ಕಾರದ ಮಹತ್ವದ ಒಂದಿಲ್ಲೊಂದು ಯೋಜನೆಗಳ ಫಲಾನುಭವಿಗಳಿದ್ದು ಪ್ರತಿಯೊಂದು ಮನೆಗಳಿಗೂ ಮೋದಿ ಜೀ ಅವರ ಸರ್ಕಾರದ ಜನಪರ ಯೋಜನೆಗಳು, ಬಡವರ ಪರವಾದ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸಿ ಪ್ರತಿ ಮನೆಗಳಿಗೆ ತಲುಪಿಸಬೇಕೆಂಬ ಸಂಕಲ್ಪ ಮಾಡಲಾಯಿತು.
ಇದೇ ವೇಳೆ ನೂತನವಾಗಿ ಆಯ್ಕೆಯಾದ ಬೂತ್ ಅಧ್ಯಕ್ಷರನ್ನು ಅಭಿನಂದಿಸಿ ಪಕ್ಷದ ಸಂಘಟನೆ ಹಾಗೂ ಮುಂದಿರುವ ಎಲ್ಲಾ ಕಾರ್ಯಯೋಜನೆಗಳನ್ನು ಯಶಸ್ವಿಗೊಳಿಸಲು ಕರೆ ನೀಡಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾದ ಶ್ರೀ ಹನುಮಂತಪ್ಪ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಸಿದ್ದಲಿಂಗಪ್ಪ ನಿಂಬೇಗುಂದಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
vikasitha Bharath Sankalpa meeting