SUDDILIVE || SHIVAMOGGA
ಹಾವು ಕಚ್ಚಿ ಕೃಷಿ ಕಾರ್ಮಿಕ ಸಾವು-Farm worker dies after being bitten by snake
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ತೋಟದಲ್ಲಿ ಕೆಲಸ ಮಾಡುವ ವೇಳೆ ಹಾವುಕಡಿದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಭದ್ರಾವತಿ ತಾಲೂಕಿನ ಅಗರದಹಳ್ಳಿ ನಿವಾಸಿ ನಿಂಗರಾಜು ಎಂಬ 33 ವರ್ಷದ ವ್ಯಕ್ತಿ ಅದೇ ಗ್ರಾಮದ ಮಂಜಪ್ಪ ಎಂಬುವರ ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿದೆ. ತಕ್ಷಣವೇ ಆತನನ್ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
Farm worker dies after being bitten by snake