SUDDILIVE || SHIVAMOGGA
ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್-Temporary break from strike
ಕಳೆದ ಐದು ದಿನಗಳಿಂದ ಮಹಾನಗರ ಪಾಲಿಕೆಯ ನೌಕರರ ವತಿಯಿಂದ ನಡೆಯುತ್ತಿರುವ ಮುಷ್ಕರವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸಂಘ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಸಂಘ ಕಳೆದ ಐದು ದಿನಗಳಿಂದ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಇಳಿದಿತ್ತು. ಸಂಘಕ್ಕೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಪತ್ರಬರೆದು ಜು.15 ರಂದು ಸಿಎಂ ಸಿದ್ದರಾಮಯ್ಯನವರೊಂದಿಗೆ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಸುವ ಬಗ್ಗೆ ಭರವಸೆ ನೀಡಿದ್ದು ಅದನ್ನ ಸಂಘಕ್ಕೆ ಪತ್ರ ಮೂಲಕ ತಿಳಿಸಿದ್ದಾರೆ. ಇದರಿಂದ ಪ್ರತಿಭಟನೆಯನ್ನ ಪಾಲಿಕೆ ಪೌರಕಾರ್ಮಿಕರು ನಿನ್ನೆಯೇ ತಾತ್ಕಾಲಿಕವಾಗಿ ಮುಷ್ಕರವನ್ನ ಕೈಬಿಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಸಚಿವರ ಪತ್ರದ ಹಿನ್ನಲೆಯಲ್ಲಿ ಇದೊಂದು ಯಶಸ್ಸಿನ ಹೆಜ್ಜೆ ಎಂದು ಸಂಘ ವರ್ಣಿಸಿದೆ.
Temporary break from strike