SUDDILIVE || SHIVAMOGGA
ವೀಲಿಂಗ್ ಮಾಡಬೇಡಿ ಎಂದ ಯುವಕನ ಮೇಲೆ ಹಲ್ಲೆ-Youth attacked for telling him not to wheele
ನೆನ್ನೆ ದಿನ ಕುವೆಂಪುನಗರ ಬಡಾವಣೆಯಲ್ಲಿ ವೀಲಿಂಗ್ ಮಾಡಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆದಿದ್ದು ಈ ಗಲಾಟೆ ಕೋಮುವಾದಕ್ಕೆ ತಿರುಗುವ ಸಂಭವ್ಯವಿದೆ.
ರಿಟೈರ್ಡ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಬಸವರಾಜ್ ರವರ ಮಗನಾದ ಅವಿನಾಶ್ ರವರು ವೀಲಿಂಗ್ ಮಾಡುತ್ತಿದ್ದ ಯುವಕರನ್ನ ವೀಲಿಂಗ್ ಮಾಡಬೇಡಿ ಎಂದು ಹೇಳಿದ್ದಾರೆ. ಇದನ್ನ ಹೇಳಿದ್ದಕ್ಕೆ ವೀಲಿಂಗ್ ಮಾಡುತ್ತಿದ್ದ ಯುವಕರ ತಂಡ ಅವಿನಾಶ ಹಲ್ಲೆ ನಡೆದಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ಅವಿನಾಶ್ ನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಅವಿನಾಶ್ ರವರನ್ನು ಇಂದು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಲಾಯಿತು
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮಾಜಿ ಜಿಲ್ಲಾಧ್ಯಕ್ಷರಾದ ರಮೇಶ್ ಬಾಬು,ರಾಷ್ಟ್ರಭಕ್ತ ಬಳಗದ ಪ್ರಮುಖರಾದ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಈ ವಿಶ್ವಾಸ್, ಬಾಲು,ಗೋವಿಂದಪ್ಪ ಉಪಸ್ಥಿತರಿದ್ದರು.
Youth attacked for telling him not to wheele