ಒಟಿಟಿ ‌ಸಮಿತಿಗೆ ದೇಶಾದ್ರಿ ನೇಮಕ- Deshadri appointed to OTT committee

SUDDILIVE || BANGLORE

ಒಟಿಟಿ ‌ಸಮಿತಿಗೆ ದೇಶಾದ್ರಿ ನೇಮಕ-Deshadri appointed to OTT committee

Deshadri, OTT


ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ ಒಟಿಟಿ ವೇದಿಕೆಯನ್ನು ಸೃಜಿಸಲು ಪೂರಕವಾಗಿ ಅಗತ್ಯ ಮಾಹಿತಿಯನ್ನು ಪಡೆದು ಯೋಜನೆಯ ರೂಪುರೇಷೆಗಳನ್ನು ರಚಿಸಲು ಅನುವಾಗುವಂತೆ ರಾಜ್ಯ ಸರ್ಕಾರವು  ತಜ್ಞರ ಸಮಿತಿಯೊಂದನ್ನು ರಚಿಸಿದ್ದು,ಅದರ ಸದಸ್ಯರಾಗಿ ಪತ್ರಕರ್ತ ದೇಶಾದ್ರಿ ಹೊಸ್ಮನೆ ಅವರನ್ನು ನೇಮಕ‌ ಮಾಡಲಾಗಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಸಾಧು ಕೋಕಿಲ,  ಶ್ರಿ ಕಂಠೀರವ ಸ್ಟುಡಿಯೋದ ಅಧ್ಯಕ್ಷರಾದ ಮೆಹಬೂಬು ಪಾಷಾ, ನಿರ್ಮಾಪಕ ಕೆ.ಪಿ‌,ಶ್ರೀಕಾಂತ್ ,ನಟ ದುನಿಯಾ ವಿಜಯ್ ಅವರನ್ನೊಳಗೊಂಡ ತಜ್ಞರ ನ್ನು ಸಮಿತಿಗೆ ನೇಮಕ‌ಮಾಡಲಾಗಿದ್ದು, ಅದರಲ್ಲಿ ದೇಶಾದ್ರಿ ಹೊಸ್ಮನೆ ಕೂಡ ಒಬ್ಬರಾಗಿದ್ದಾರೆ.

 ನುರಿತ ತಜ್ಞರು/ತಾಂತ್ರಿಕ ಪರಿಣಿತರ ನಿಯೋಗವೊಂದನ್ನು ರಚಿಸಿ ಸಮಗ್ರ ಅಧ್ಯಯನ ಕೈಗೊಂಡು ಸರ್ಕಾರಕ್ಕೆ ವರದಿ ಪಡೆಯಲು ಅಗತ್ಯವಾದ ಅನುದಾನಕ್ಕೆ ಮಂಜೂರಾತಿ ನೀಡಿ  ಅದೇಶಿಸಿದೆ.

Deshadri appointed to OTT committee

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close