SUDDILIVE || THIRTHAHALLI
ಕರೆಂಟ್ ಶಾಕ್, ಅಡಿಕೆ ಗೊನೆಗಾರ ಸಾವು-Areca nut harvester dies of electric shock
ಅಡಿಕೆ ಗೊನೆ ಕೀಳುವಾಗ ದೋಟಿ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಬಸವಾನಿ ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಶನಿವಾರ ಸಂಜೆ ಘಟನೆ ಸಂಭವಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ದೋರಗಲ್ಲು ಗ್ರಾಮದ ಸತೀಶ್ (50) ಮೃತ ವ್ಯಕ್ತಿ. ಇವರು ಈ ಭಾಗದಲ್ಲಿ ಹಲವು ವರ್ಷಗಳಿಂದ ಗೊನೆಗಾರರಾಗಿ ಕೆಲಸ ಮಾಡುತ್ತಿದ್ದರು. ಲಕ್ಷ್ಮೀಪುರದ ರೈತ ಸುಂದರೇಶ್ ಅವರ ಅಡಿಕೆ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Areca nut harvester dies of electric shock
