SUDDILIVE || SHIVAMOGGA
ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ಉಪನ್ಯಾಸಕ್ಕೆ ಡಿಎಸ್ಎಸ್ ಪ್ರತಿಭಟನೆ-DSS protests against Bhagavad Gita and crime control lecture
ಶಂಕರಘಟ್ಟದಲ್ಲಿರುವ ಕುವೆಂಪು ವಿವಿ ಮುಂಭಾಗ ಡಿಎಸ್ಎಸ್ ಪ್ರತಿಭಟನೆ ನಡೆಸಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ಉಪನ್ಯಾಸ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ.
ಕುವೆಂಪು ವಿವಿಯಲ್ಲಿ ಭಗವದ್ಗೀತೆ ಅಭಿಯಾನ ಜಿಲ್ಲಾ ಸಮಿತಿ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಚಾರಣ ಸಂಕಿರಣ ವಿರೋಧಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡ ಗುರುಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕದತಪಡಿಸಲಾಗಿದೆ.
DSS protests against Bhagavad Gita and crime control lecture
