SUDDILIVE || SHIVAMOGGA
ನ.30 ರಂದು ಕೇರಳದ ರಾಜ್ಯಪಾಲರು ಶಿವಮೊಗ್ಗಕ್ಕೆ-Kerala Governor to visit Shivamogga on November 30
ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ನ.30ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ ಹೈದರಾಬಾದ್ನಿಂದ ವಿಮಾನದಲ್ಲಿ ಹೊರಟು 10.40ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಬೆಳಗ್ಗೆ 11.30ಕ್ಕೆ ಫ್ರೀಡಂ ಪಾರ್ಕ್ಗೆ ಆಗಮಿಸಲಿದ್ದು, ಶ್ರೀ ಭಗವದ್ಗೀತೆ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12.50ಕ್ಕೆ ಶಿವಮೊಗ್ಗದ ಸರ್ಕ್ಯೂಟ್ ಹೌಸ್ಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಂಡಿಗೋ ವಿಮಾನದ ಮೂಲಕ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.
Kerala Governor to visit Shivamogga on November 30
