20 ಕ್ವಿಂಟಾಲ್​ ಭತ್ತ ಸುಟ್ಟು ಭಸ್ಮ-20 quintals of paddy burnt to ashes

 SUDDILIVE || SHIVAMOGGA

20 ಕ್ವಿಂಟಾಲ್​ ಭತ್ತ ಸುಟ್ಟು ಭಸ್ಮ-20 quintals of paddy burnt to ashes    

Peddy, Burnt

ಭತ್ತದ ಹೊರೆ ತುಂಬಿಕೊಂಡು ಹೋಗ್ತಿದ್ದ ಟ್ರ್ಯಾಕ್ಟರ್‌ಗೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡು ಭತ್ತದ ಹೊರೆ ಸುಟ್ಟುಹೋಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬಿಲ್ಗುಣಿ ಘಂಟೆತವರು ರಸ್ತೆಯಲ್ಲಿ ನಡೆದಿದೆ. ಈ ಅಗ್ನಿ ಅವಘಡದಲ್ಲಿ ಸುಮಾರು ಒಂದು ಎಕರೆ ಪ್ರದೇಶದ ಭತ್ತದ ಪೈರು ನಾಶವಾಗಿದ್ದು, ರೈತನಿಗೆ ಸಾವಿರಾರು ರೂಪಾಯಿ ನಷ್ಟವಾಗಿದೆ.

ಇಂದು ಮಧ್ಯಾಹ್ನ ಸಂಭವಿಸಿದ ಈ ಅನಾಹುತದಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ಈ ದುರಂತಕ್ಕೆ ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ನೇರ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

Peddy, Burnt

ಸ್ಥಳೀಯರ ಪ್ರಕಾರ , ರಸ್ತೆಯ ಮೇಲೆ ಜೋತು ಬಿದ್ದಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವಂತೆ ಜೆಇಇ  ಮತ್ತು ಎಇಇ ಅವರಿಗೆ ಒಂದು ತಿಂಗಳ ಹಿಂದೆಯೇ ಮನವಿ ಸಲ್ಲಿಸಲಾಗಿತ್ತು. ಆದರೆ, ಅಧಿಕಾರಿಗಳು ಈ ಮನವಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ನಿರ್ಲಕ್ಷ್ಯ ತೋರಿದ್ದೇ ಈ ದೊಡ್ಡ ಅನಾಹುತಕ್ಕೆ ಕಾರಣವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಮಾರು 1 ಎಕರೆಯಲ್ಲಿ ಬೆಳೆದಿದ್ದ 20 ಕ್ವಿಂಟಾಲ್​ಗಿಂತಲೂ ಹೆಚ್ಚು ಭತ್ತ  ಕೈಗೆ ಬಂದಿತ್ತಾದರೂ  ಸಾಗಿಸುವಾಗ ವಿದ್ಯುತ್ ತಂತಿಯಿಂದಾಗಿ ಸುಟ್ಟುಹೋಗಿದೆ.

20 quintals of paddy burnt to ashes    

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close