SUDDILIVE || BHADRAVATHI
ಬಿಕೆ ಹರಿಪ್ರಸಾದ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಆಗ್ರಹ-BJP demands action against BK Hariprasad
ವಿಧಾನಮಂಡಲದ ವಿಶೇಷ ಅಧಿವೇಶನ ಸಂದರ್ಭದಲ್ಲಿ ಮಾನ್ಯ ರಾಜ್ಯಪಾಲರ ಕಡೆಗೆ ಕೈ ತೋರಿಸಿ ಅವಮಾನಕಾರಿ ವರ್ತನೆ ತೋರಿರುವ ಕಾಂಗ್ರೆಸ್ನ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಭದ್ರಾವತಿಯ ಬಿಜೆಪಿ ಯುವ ಮೋರ್ಚ ಮತ್ತು ಹೊಳೆಹೊನ್ನೂರು ಮಂಡಲ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಪಿಸಲಾಯಿತು.
ವಿಧಾನ ಸಭೆಯ ವಿಶೇಷ ಅಧಿವೇಶನದಲ್ಲಿ ಎಙೆಲ್ ಸಿ ಬಿ.ಕೆ.ಹರಿಪ್ರಸಾದ್ ಅವರು ರಾಜ್ಯಪಾಲರಿ್ಎ ಬೆರಳು ತೋರಿಸಿ ಗೂಂಡಾಗಿರಿ ವರ್ತಿಸಿದ್ದಾರೆ ಎಂದು ಬಿಜೆಪಿ ಮನವಿಯಲ್ಲಿ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕರಾದ ಅಶೋಕ್ ನಾಯಕ್ ಅವರು ಬಿಜೆಪಿ ಭದ್ರಾವತಿ ಮಂಡಲ ಅಧ್ಯಕ್ಷರಾದ ಧರ್ಮಪ್ರಸಾದ್ ಹೊಳೆಹೊನ್ನೂರು ಅಧ್ಯಕ್ಷರಾದ ಮಲ್ಲೇಶಣ್ಣ ಹಾಗೂ ಬಿಜೆಪಿ ಯುವ ಮೋರ್ಚಾ ಭದ್ರಾವತಿ ಅಧ್ಯಕ್ಷರಾದ ಧನುಷ್ ಹಾಗೂ ಅಧ್ಯಕ್ಷರಾದ ಕಿರಣ್ ಪಟೇಲ್ ಅವರ ನೇತೃತ್ವದಲ್ಲಿ ಶ್ರೀನಿವಾಸ ಪ್ರದೀಪ್ ಹನುಮಂತ ಪಟೇಲ್ ರಮೇಶ್ ಲಿಖಿತ್ ಎರಡು ಮಂಡಲದ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
BJP demands action against BK Hariprasad

