ವಿಕಸಿತ ಭಾರತದತ್ತ ದಿಟ್ಟ ಹೆಜ್ಜೆ: ಕರ್ನಾಟಕದ ಪ್ರಗತಿಗೆ ವೇಗ ನೀಡುವ ಜನಪರ ಬಜೆಟ್ – ವಿ.ಪ ಶಾಸಕ ಡಾ. ಧನಂಜಯ ಸರ್ಜಿ- A bold step towards a developed India

SUDDILIVE || SHIVAMOGGA

ವಿಕಸಿತ ಭಾರತದತ್ತ ದಿಟ್ಟ ಹೆಜ್ಜೆ: ಕರ್ನಾಟಕದ ಪ್ರಗತಿಗೆ ವೇಗ ನೀಡುವ ಜನಪರ ಬಜೆಟ್ – ವಿ.ಪ ಶಾಸಕ ಡಾ. ಧನಂಜಯ ಸರ್ಜಿ-A bold step towards a developed India: A pro-people budget that will accelerate Karnataka's progress – V.P MLA Dr. Dhananjaya Sarji

MLA, Sarji


ಕೇಂದ್ರ ಸರ್ಕಾರ ಮಂಡಿಸಿರುವ 2026–27ನೇ ಸಾಲಿನ ಬಜೆಟ್ ದೇಶದ ಆರ್ಥಿಕತೆಯನ್ನು ಬಲಪಡಿಸುವುದಲ್ಲದೆ, ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಹೊಸ ಚೈತನ್ಯ ನೀಡಿದೆ ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ಶ್ಲಾಘಿಸಿದ್ದಾರೆ.

ಈ ಬಾರಿಯ ಬಜೆಟ್‌ನಲ್ಲಿ 16ನೇ ಹಣಕಾಸು ಆಯೋಗದ ಅಡಿಯಲ್ಲಿ ಕರ್ನಾಟಕಕ್ಕೆ 4.13% ತೆರಿಗೆ ಹಂಚಿಕೆ ದೊರೆತಿರುವುದು ಅತ್ಯಂತ ಸಂತಸದ ವಿಷಯವಾಗಿದ್ದು, ಇದರಿಂದ ರಾಜ್ಯಕ್ಕೆ ಒಟ್ಟು ರೂ. 63,050 ಕೋಟಿ ಅನುದಾನ ಲಭ್ಯವಾಗಲಿದೆ. ಇದರಲ್ಲಿನ ರೂ. 7,387 ಕೋಟಿ ಹೆಚ್ಚುವರಿ ಅನುದಾನವು ರಾಜ್ಯದ ಮೂಲಸೌಕರ್ಯ, ನೀರಾವರಿ ಹಾಗೂ ಸಮಾಜ ಕಲ್ಯಾಣ ಯೋಜನೆಗಳಿಗೆ ದೊಡ್ಡ ಮಟ್ಟದ ಆಸರೆಯಾಗಲಿದ್ದು, ಇದು ಕೇಂದ್ರ ಸರ್ಕಾರದ ಜನಪರ ನಿಲುವಿಗೆ ಸಾಕ್ಷಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಜೆಟ್‌ನಲ್ಲಿ ಹಣಕಾಸು ಕೊರತೆಯನ್ನು 4.3% ಕ್ಕೆ ಮಿತಿಗೊಳಿಸಿರುವುದು ದೇಶದ ಆರ್ಥಿಕ ಶಿಸ್ತನ್ನು ಪ್ರತಿಬಿಂಬಿಸುತ್ತದೆ. ದೇಶಾದ್ಯಂತ ರಸ್ತೆ, ರೈಲ್ವೆ, ಡಿಜಿಟಲ್ ಮತ್ತು ನಗರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ರೂ. 11 ಲಕ್ಷ ಕೋಟಿ ಬಂಡವಾಳ ವೆಚ್ಚ (Capex) ಘೋಷಿಸಿರುವುದು ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲಿದೆ. ವಿಶೇಷವಾಗಿ ರಾಜ್ಯಗಳಿಗೆ ಬೆಂಬಲ ನೀಡುವ SASCI ಯೋಜನೆಯಡಿ ರೂ. 2 ಲಕ್ಷ ಕೋಟಿ ಒದಗಿಸಿರುವುದು ಸಹಕಾರಿ ಫೆಡರಲಿಸಂ ತತ್ವಕ್ಕೆ ಉತ್ತಮ ಉದಾಹರಣೆಯಾಗಿದೆ. ಯುವಶಕ್ತಿಯ ಸದ್ಬಳಕೆಗಾಗಿ ರೂ. 2 ಲಕ್ಷ ಕೋಟಿ ಮೊತ್ತದಲ್ಲಿ ಆರು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವುದು ಹಾಗೂ ಮುಂದಿನ ಐದು ವರ್ಷಗಳಲ್ಲಿ 50 ಲಕ್ಷ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿ ಹೊಂದಿರುವುದು ದೇಶದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಶ್ಲಾಘನೀಯ.


ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೂ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ‘ಭಾರತ್–ವಿಸ್ತಾರ್’ ಯೋಜನೆಯಡಿ ಪಲ್ಸ್‌, ಜೋಳ ಹಾಗೂ ತರಕಾರಿ ಉತ್ಪಾದನೆಗೆ ನೀಡಿರುವ ಉತ್ತೇಜನ ಮತ್ತು ತರಕಾರಿ ಉತ್ಪಾದನಾ ಕ್ಲಸ್ಟರ್‌ಗಳ ಸ್ಥಾಪನೆಯು ರೈತರ ಆದಾಯವನ್ನು ಹೆಚ್ಚಿಸಲು ಸಹಕಾರಿಯಾಗಲಿದೆ. ಇದರೊಂದಿಗೆ ‘ಪೂರ್ವೋದಯ’ ಯೋಜನೆಯ ಮೂಲಕ ಪ್ರಾದೇಶಿಕ ಸಮತೋಲನ ಕಾಯ್ದುಕೊಳ್ಳಲಾಗಿದೆ. ರಕ್ಷಣಾ ವಲಯಕ್ಕೆ ರೂ. 6.81 ಲಕ್ಷ ಕೋಟಿ ಅನುದಾನ ಮೀಸಲಿಡುವ ಮೂಲಕ ‘ಆತ್ಮನಿರ್ಭರ ಭಾರತ’ದ ಕನಸನ್ನು ಸಾಕಾರಗೊಳಿಸಲು ಮುಂದಾಗಿರುವುದು ಹೆಮ್ಮೆಯ ವಿಷಯವಾಗಿದೆ. ಇನ್ನು MSME ವಲಯಕ್ಕೆ ಹೆಚ್ಚುವರಿ ಕ್ರೆಡಿಟ್ ಗ್ಯಾರಂಟಿ ಮತ್ತು ಮುದ್ರಾ ಸಾಲದ ಮಿತಿ ಹೆಚ್ಚಳ ಮಾಡಿರುವುದು ಸಣ್ಣ ಉದ್ಯಮಿಗಳಿಗೆ ವರದಾನವಾಗಲಿದೆ. ಒಟ್ಟಾರೆಯಾಗಿ ಈ ಬಜೆಟ್ ‘ವಿಕಸಿತ ಭಾರತ 2047’ ರ ಗುರಿಯತ್ತ ದೇಶವನ್ನು ಕೊಂಡೊಯ್ಯುವ ಸಮರ್ಥ ದಾರಿಯಾಗಿದ್ದು, ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಇದು ಹೊಸ ಬಾಗಿಲುಗಳನ್ನು ತೆರೆದಿದೆ ಎಂದು ಡಾ. ಧನಂಜಯ ಸರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

A bold step towards a developed India     

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close