ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು- SSLC student dies after accidentally slipping into lake

SUDDILIVE || RIPPONPETE

ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು- SSLC student dies after accidentally slipping into lake     

Sslc, student

ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ.

ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ಆತ, ಬಳಿಕ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಂತರ ಸ್ಥಳೀಯರು ಯುವಕನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಧೃಡಪಡಿಸಿದ್ದಾರೆ.

ಮೃತ ವಿದ್ಯಾರ್ಥಿ ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದು, ಮೂರು ಪಬ್ಲಿಕ್ ಪರೀಕ್ಷೆಗಳನ್ನೂ ಬರೆದಿದ್ದನು.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

SSLC student dies after accidentally slipping into lake

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close