SUDDILIVE || THIRTHAHALLI
ಬಾವಿ ನೀರಿಗೆ ವಿಷ ಬೆರೆಸಿದ ಆರೋಪ-Accused of poisoning well water
ತಾಲೂಕಿನ ಗಿಣಿಯ ಗ್ರಾಮದಲ್ಲಿ ಹಳೆಯ ದ್ವೇಷದ ಹಿನ್ನೆಲೆ ಕುಡಿಯುವ ನೀರಿನ ಬಾವಿಗೆ ವಿಷ ಬೆರೆಸಿರುವ ಘಟನೆ ನಡೆದಿದೆ. ಗ್ರಾಮದ ನಿವಾಸಿ ರಾಘವೇಂದ್ರ ಎಂಬುವವರ ಜಮೀನಿನ ಬಾವಿಗೆ ವಿಷ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಮಂಗಳವಾರ ಸಂಜೆ ರಾಘವೇಂದ್ರ ಅವರು ಬಾವಿಯ ಬಳಿ ಹೋಗಿದ್ದಾಗ, ನೀರಿನಲ್ಲಿ ವಿಷದ ವಾಸನೆ ಬರುತ್ತಿರುವುದು ಪತ್ತೆಯಾಗಿದೆ. ಜಮೀನು ವಿವಾದದ ಹಿನ್ನೆಲೆ ವಿಷ ಬೆರೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Accused of poisoning well water
