ಚರಂಡಿಗೆ ಉರುಳಿ ಬಿದ್ದ ಕಾರು-Car falls into drain

SUDDILIVE || SAGARA

ಚರಂಡಿಗೆ ಉರುಳಿ ಬಿದ್ದ ಕಾರು-Car falls into drain

Cars, drain

ಬಿಹೆಚ್ ರಸ್ತೆಯ ಗಣಪತಿ ಕೆರೆ ಸಮೀಪ ಕಾರೊಂದು ಚಾಲಕನ ನಿಯಂತ್ಚರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ವರದಿಯಾಗಿದೆ. 

ಸಾಗರ ನಗರದ ಹೃದಯಭಾಗವಾದ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯ ಗಣಪತಿ ಕೆರೆ ಸಮೀಪ ನಿನ್ನೆ ಮಧ್ಯಾಹ್ನ ಅಪಘಾತವೊಂದು ಸಂಭವಿಸಿದೆ. ಶಿವಮೊಗ್ಗದಿಂದ ಸಿರ್ಸಿ ಕಡೆಗೆ ಸಂಚರಿಸುತ್ತಿದ್ದ ಕಾರೊಂದು, ರಸ್ತೆ ಮಧ್ಯೆಯಿದ್ದ ವಿದ್ಯುತ್ ಕಂಬವನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ನೇರವಾಗಿ ಚರಂಡಿಗೆ ಉರುಳಿ ಬಿದ್ದಿದೆ. 

ಸಂಚಾರಕ್ಕೆ ಅಡ್ಡವಿರುವ ವಿದ್ಯುತ್ ಕಂಬ

ಅಪಘಾತದಲ್ಲಿ ಅದೃಷ್ಟವಶಾತ್ ಕಾರಿನಲ್ಲಿದ್ದ ಕುಟುಂಬದ ಸದಸ್ಯರಿಗೆ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಬಿಹೆಚ್ ರಸ್ತೆ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು, ಗಣಪತಿ ಕೆರೆ ಭಾಗದಲ್ಲಿ ರಸ್ತೆ ವಿಸ್ತರಣೆಯಾಗಿದೆ. ಆದರೆ, ವಿಸ್ತರಣೆಯಾದ ರಸ್ತೆಯ ಮಧ್ಯಭಾಗದಲ್ಲಿರುವ ಹಳೆಯ ವಿದ್ಯುತ್ ಕಂಬಗಳನ್ನು ಇನ್ನೂ ತೆರವುಗೊಳಿಸದಿರುವುದೇ ಇರುವುದು ಈ ಅನಾಹುತಕ್ಕೆ ಮುಖ್ಯ ಕಾರಣವಾಗಿದೆ ಎಂದು ಶಂಕಿಸಲಾಗಿದೆ.  

ರಸ್ತೆ ನಯವಾಗಿದೆ ಎಂದು ವೇಗವಾಗಿ ಬರುವ ವಾಹನ ಸವಾರರಿಗೆ ರಸ್ತೆ ಮಧ್ಯದ ಈ ಕಂಬಗಳು ತಕ್ಷಣಕ್ಕೆ ಗೋಚರಿಸುತ್ತಿಲ್ಲ, ಇದು ಸವಾರರಿಗೆ ಮೃತ್ಯುಪಾಶವಾಗಿ ಪರಿಣಮಿಸಿದೆ. ಇದೇ ಸ್ಥಳದಲ್ಲಿ ಈ ಹಿಂದೆಯೂ ಹಲವು ಅಪಘಾತಗಳು ಸಂಭವಿಸಿದ್ದು, ಅಧಿಕಾರಿಗಳ ವಿಳಂಬ ಧೋರಣೆಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Car falls into drain

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close