ಗಾಳಿಪುರ-Ksrtc ಬಸ್ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರ ಸಾವು-Galipura-Ksrtc bus collides with bike, biker dies

 SUDDILIVE || SAGARA

ಗಾಳಿಪುರ-Ksrtc ಬಸ್ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರ ಸಾವು-Galipura-Ksrtc bus collides with bike, biker dies    

Ksrtc, galipura

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರಿವಂತೆ-ಗಾಳಿಪುರ ಮಾರ್ಗ ಮಧ್ಯೆ ಇಂದು ಮಧ್ಯಾಹ್ನ ಸಾರಿಗೆ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ಹುಣಸೂರು ಮೂಲದ ಅಶೋಕ್ (25) ಎಂದು ಗುರುತಿಸಲಾಗಿದೆ.

ಇಂದು ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಸಿರಿವಂತೆ ಮತ್ತು ಗಾಳಿಪುರ ರಸ್ತೆಯ ಮಧ್ಯೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್‌ ಸವಾರ ಅಶೋಕ್ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಅತಿಯಾದ ರಕ್ತಸ್ರಾವದಿಂದಾಗಿ ಅವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ

ಅಪಘಾತ ಸಂಭವಿಸಿದ ಬೆನ್ನಲ್ಲೇ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಶವಗಾರಕ್ಕೆ ರವಾನಿಸಿದ್ದಾರೆ.

Galipura-Ksrtc bus collides with bike, biker dies    

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close