SUDDILIVE || SHIVAMOGGA
ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯ-Demand for implementation of permanent irrigation scheme
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿವಿಧ ರೈತಪರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯಿತು.
ರೈತ ಸಂಘದ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಭದ್ರಾ ಜಲಾಶಯದಿಂದ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಶಾಶ್ವತ ಯೋಜನೆಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ಅನುದಾನದಿಂದ ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.
ಪ್ರತಿಭಟನಾಕಾರರು ಜಿಲ್ಲೆಯ ಹಲವೆಡೆ ಕೆರೆಗಳು ಒಣಗುತ್ತಿದ್ದು, ರೈತರು ಮತ್ತು ಗ್ರಾಮೀಣ ಜನತೆ ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು. ಭದ್ರಾ ಜಲಾಶಯದಿಂದ ಸುಮಾರು ೩೫ ಟಿಎಂಸಿ ನೀರನ್ನು ಬಳಸಿ ಜಿಲ್ಲೆಯ ಕೆರೆಗಳಿಗೆ ನೀರು ಹರಿಸುವ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.
ಇದಲ್ಲದೆ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ, ಬೆಳೆಗಳಿಗೆ ನ್ಯಾಯಯುತ ಬೆಂಬಲ ಬೆಲೆ ನೀರಾವರಿ ಸೌಲಭ್ಯಗಳ ವಿಸ್ತರಣೆ ಹಾಗೂ ರೈತಪರ ಯೋಜನೆಗಳ ಸಮರ್ಪಕ ಜಾರಿಗೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ರೈತ ಮುಖಂಡರು, ರೈತ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ರೈತರು ಭಾಗವಹಿಸಿದ್ದರು. ಬಳಿಕ ಪ್ರತಿಭಟನಾಕಾರರು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Demand for implementation of permanent irrigation scheme

