ಲಾರಿ ಟಯರ್ ಬ್ಲಾಸ್ಟ್ ಆಗಿ ಪಾದಚಾರಿ ಸಾವು-Pedestrian dies after lorry tire blast

SUDDILIVE || BHADRAVATHI

ಲಾರಿ ಟಯರ್ ಬ್ಲಾಸ್ಟ್ ಆಗಿ ಪಾದಚಾರಿ ಸಾವು-Pedestrian dies after lorry tire blast 

Pedestrian, lorry

ಭದ್ರಾವತಿ, ಜೂನ್ 29: ಭದ್ರಾವತಿ ಪಟ್ಟಣದ ಶಿವಾನಿ ಕ್ರಾಸ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ 25 ವರ್ಷದ ಯುವಕ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪೊಲೀಸರ ದಾಖಲೆಯ ಪ್ರಕಾರ, ಮೃತರನ್ನು ಇಸ್ಮಾಯಿಲ್ ಜಬಿವುಲ್ಲಾ (25) ಎಂದು ಗುರುತಿಸಲಾಗಿದೆ. ಅವರು ಭದ್ರಾವತಿ ತಾಲೂಕಿನ ತಿಪ್ಲಾಪುರ ಗ್ರಾಮದ ನಿವಾಸಿಯಾಗಿದ್ದು, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಜೂನ್ 27ರಂದು ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆಗೆ ಕೆಲಸದ ನಿಮಿತ್ತ ಶಿವಾನಿ ಕ್ರಾಸ್ ರಸ್ತೆಯ ಎಡಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕೆಎ-17-ಡಿ-1789 ಸಂಖ್ಯೆಯ ಭಾರತ್ ಬೆಂಜ್ ಲಾರಿಯನ್ನು ಚಾಲಕ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ್ದಾನೆ ಎನ್ನಲಾಗಿದೆ. ಲಾರಿಯ ಹಿಂಭಾಗದ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ಎಡಭಾಗಕ್ಕೆ ನುಗ್ಗಿ ಪಾದಚಾರಿಯಾಗಿದ್ದ ಇಸ್ಮಾಯಿಲ್ ಅವರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಇಸ್ಮಾಯಿಲ್ ಅವರ ತಲೆಯ ಮೇಲೆ ಲಾರಿಯ ಚಕ್ರ ಹರಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡರು. ಸ್ಥಳೀಯರು ಅವರನ್ನು ಮೊದಲು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ 108 ಆಂಬುಲೆನ್ಸ್ ಮೂಲಕ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆ ಸಂಬಂಧ ಭದ್ರಾವತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 281 ಹಾಗೂ 106(1) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Pedestrian dies after lorry tire blast 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close