ಹುಂಚ-ಮೀನು ಹಿಡಿಯಲು ಹೋದ ಯುವಕ ನೀರು ಪಾಲು- A young man who went to catch fish fell into the water

SUDDILIVE || SHIVAMOGGA

ಹುಂಚ-ಮೀನು ಹಿಡಿಯಲು ಹೋದ ಯುವಕ ನೀರು ಪಾಲು- A young man who went to catch fish fell into the water  

Catch, fish

ಹೊಸನಗರ ತಾಲೂಕಿನ ಹುಂಚ ಸಮೀಪದ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದು ದಾರುಣವಾಗಿ ಅಂತ್ಯಕಂಡ ಘಟನೆ ಮಂಗಳವಾರ ಮಧ್ಯಾಹ್ನ ವರದಿಯಾಗಿದೆ. 

ಮೃತ ಯುವಕನನ್ನು ಹುಂಚ ಮಂಜುನಾಥ ನಗರದ ನಿವಾಸಿ ಮಹೇಂದ್ರ ಎಂದು ಗುರುತಿಸಲಾಗಿದೆ.

​ಮಹೇಂದ್ರ ಹಾಗೂ ಆತನ ಸ್ನೇಹಿತರಾದ ಪ್ರದೀಪ, ಗೋವಿಂದ ಮತ್ತು ವಿನಾಯಕ ಸೇರಿ ಒಟ್ಟು ನಾಲ್ವರು ಮುತ್ತಿನಕೆರೆಯಲ್ಲಿ ಮೀನು ಹಿಡಿಯುವ ಉದ್ದೇಶದಿಂದ ತೆರಳಿದ್ದರು. ಈ ಸಂದರ್ಭದಲ್ಲಿ ಕೆರೆಯ ದಂಡೆಯ ಮೇಲೆ ನಿಂತಿದ್ದ ಮಹೇಂದ್ರ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಈಜು ಬಾರದ ಕಾರಣ ಆತ ನೀರಿನಲ್ಲಿ ಮುಳುಗಿದ್ದು, ಇದನ್ನು ಕಂಡು ಗಾಬರಿಗೊಂಡ ಆತನ ಸ್ನೇಹಿತರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

​ಸ್ಥಳೀಯರಿಂದ ಮಾಹಿತಿ ತಿಳಿದ ಕೂಡಲೇ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಲಾಯಿತು.

ಹೊಸನಗರ ಅಗ್ನಿಶಾಮಕ ಠಾಣಾಧಿಕಾರಿ ಆನಂದಪ್ಪ ಎನ್. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ರಾಜೇಶ್ ಕೆ.ಎಚ್., ಮಂಜುನಾಥ್ ಬಿ., ಆಂಜನೇಯ ಬಿ.ಸಿ., ಸುರೇಶ್ ಗೌಡ ಸಿ. ಪಾಟೀಲ್, ಪ್ರವೀಣ್ ಕುಮಾರ್ ಬಿ.ಬಿ. ಮತ್ತು ಅಶ್ಪಕ್ ಬಿ. ಅವರು ಕಾರ್ಯಾಚರಣೆ ನಡೆಸಿ, ಕೆರೆಯಿಂದ ಮಹೇಂದ್ರನ ಮೃತದೇಹವನ್ನು ಹೊರತೆಗೆದಿದ್ದಾರೆ.

​ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. 

ಯುವಕನ ಅಕಾಲಿಕ ನಿಧನದಿಂದ ಮಂಜುನಾಥ ನಗರದಲ್ಲಿ ಸೂತಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

A young man who went to catch fish fell into the water

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close